ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm