ಬ್ರೇಕಿಂಗ್ ನ್ಯೂಸ್
27-04-22 11:15 pm Bangalore Correspondent ಕ್ರೈಂ
ಬೆಂಗಳೂರು, ಎ.28 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತೊಂದು ಭಾರೀ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ರಾಜ್ಯದ ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳ ಅವ್ಯವಹಾರದಲ್ಲಿ ಭಾಗಿಯಾಗಿದ್ದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ಸಿವಿಲ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ಮಾಡಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಡಿ ನಡೆಯುವ ಮಹತ್ವದ ಯೋಜನೆಯಲ್ಲಿ ಗೋಲ್ಮಾಲ್ ನಡೆದಿದ್ದು ಬರೋಬ್ಬರಿ 3405 ಕೋಟಿ ರೂಪಾಯಿ ದುರುಪಯೋಗ ಆಗಿರುವ ಬಗ್ಗೆ ಆರೋಪ ಕೇಳಿಬಂದಿದೆ. ಗ್ರಾಮೀಣ ಭಾಗದ ಜನರ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದ್ದು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುತ್ತದೆ. ಕೇಂದ್ರ ಸರಕಾರದ ಶೇ. 75 ಮತ್ತು ರಾಜ್ಯ ಸರ್ಕಾರದ ಶೇ. 25ರ ಅನುದಾನದ ಯೋಜನೆ ಇದಾಗಿದೆ. ಕೇಂದ್ರದಿಂದ ಬಿಡುಗಡೆಯಾದ ಹಣವನ್ನು ಐಎಎಸ್ ಅಧಿಕಾರಿಗಳು ಸೇರಿ ಲೂಟಿ ಹೊಡೆದಿದ್ದಾರೆಂಬ ಗಂಭೀರ ಆರೋಪದ ಬಗ್ಗೆ ಎಸಿಬಿ ತನಿಖೆಗೆ ಆದೇಶ ನೀಡಲಾಗಿದೆ. ಈಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಬಂಡವಾಳ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ಕೋರ್ಟಿಗೆ ವರದಿ ಸಲ್ಲಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೋರ್ಟ್ ಖಡಕ್ ಸೂಚನೆ ನೀಡಿದೆ. ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಕೆ. ಲಕ್ಷ್ಮಿನಾರಾಯಣ ಭಟ್ ಆದೇಶ ನೀಡಿದ್ದಾರೆ.

ಸಿಆರ್ ಪಿಸಿ ಸೆಕ್ಷನ್ 202 (1)ರ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಡಿವೈಎಸ್ಪಿಗಿಂತ ಹೆಚ್ಚಿನ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಆರೋಪಿ 1 ರಾಜ್ಯ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಅಮಿತ್ ಪ್ರಸಾದ್, ಆರೋಪಿ ಎರಡು - ಡಾ. ಇ.ವಿ ರಮಣರೆಡ್ಡಿ, ಎಸಿಎಸ್, ಇಂಡಸ್ಟ್ರೀಸ್ & ಕಾಮರ್ಸ್, ಆರೋಪಿ ಮೂರನೇ ಹೆಸರಾಗಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಾಲ್ಕನೇ ಆರೋಪಿ ಆರ್ ಡಿಪಿಆರ್ ಪದನಿಮಿತ್ತ ಅಧಿಕಾರಿ ಡಾ.ಬೋರೇಗೌಡ, ಐದನೇ ಆರೋಪಿ ಆರ್ ಡಿಪಿಆರ್ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ರಾಮಕೃಷ್ಣ , ಆರನೇ ಆರೋಪಿ ಆರ್ ಡಿಪಿಆರ್ ಅಧಿಕಾರಿ ಸೀಲಮ್ ಗಿರಿ ಅವರನ್ನು ಹೆಸರಿಸಲಾಗಿದೆ.
Bengaluru Big corruption of thousand of crores exposed in which IAS officials are found involved in Panchyath Raj department.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm