ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm