ಬ್ರೇಕಿಂಗ್ ನ್ಯೂಸ್
30-04-22 01:37 pm Mangalore Correspondent ಕ್ರೈಂ
ಮಂಗಳೂರು, ಎ.30: ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಮಸ್ಜಿದುಲ್ ಹುದಾ ಜುಮ್ಮಾ ಮಸೀದಿಯಲ್ಲಿ ಎ.28ರ ರಾತ್ರಿ ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದಾಗ ಅನ್ಯಮತೀಯನೊಬ್ಬ ಅಕ್ರಮವಾಗಿ ನುಗ್ಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಮಸೀದಿಯಲ್ಲಿ ಲೈಲಾತುಲ ಖದರ್ ಎನ್ನುವ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಡರಾತ್ರಿ 2 ಗಂಟೆ ವೇಳೆಗೆ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ ಯುವಕ ನುಗ್ಗಿದ್ದು, ಅಸಭ್ಯವಾಗಿ ವರ್ತಿಸಿದ್ದಾನೆ. ಹೆಣ್ಣು ಮಕ್ಕಳ ಕೈಹಿಡಿದೆಳೆದು ಅವಮಾನಕಾರಿ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಫಾಯಿಸಾ ತಮೀಮ್ ಎಂಬವರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಫಾಯಿಸಾ ತಮೀಮ್, ಬಿಫಾತಿಮಾ, ಆಯೆಷಾ ನಾಝ್ ಮತ್ತಿತರ ಮಹಿಳೆಯರು ಜೊತೆಗಿದ್ದಾಗ ಕೊಠಡಿಗೆ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾಗಿ ಎ.29ರ ಮಧ್ಯಾಹ್ನ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಘಟನೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿ ಸುಜಿತ್ ಶೆಟ್ಟಿ ಎಂಬಾತನನ್ನು ಬಂಧಿಸಿದ್ದಾರೆ.

ಅಸಭ್ಯವಾಗಿ ವರ್ತಿಸಿಲ್ಲ , ಸಿಸಿಟಿವಿ ಚೆಕ್ ಮಾಡಿ
ನಿಟ್ಟೆ ಮೂಲದ ಸುಜಿತ್, ತೊಕ್ಕೊಟ್ಟಿನ ಸೀಶೆಲ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕಿದ್ದ. ಮಸೀದಿಗೆ ಬಂದಿದ್ದ ವ್ಯಕ್ತಿಗಳು ಬಾರ್ ಮುಂಭಾಗದಲ್ಲಿ ಕಾರು ಪಾರ್ಕಿಂಗ್ ಮಾಡಿದ್ದು ಈ ವೇಳೆ ಅಲ್ಲಿದ್ದ ಸುಜಿತ್ ಬಳಿ, ಇದಕ್ಕಾಗಿ ಹಣ ಕೊಡುತ್ತೇನೆ, ಮತ್ತೆ ಮಸೀದಿಗೆ ಬರುವಂತೆ ಹೇಳಿದ್ದರಂತೆ. ಅದರಂತೆ, ಕೆಲಹೊತ್ತಿನ ಬಳಿಕ ಹಣದಾಸೆಯಿಂದ ಸುಜಿತ್ ಮಸೀದಿ ಬಳಿಗೆ ತೆರಳಿದ್ದು ಹಣ ಕೊಡುತ್ತೇನೆ ಎಂದಿದ್ದವರನ್ನು ಹುಡುಕಾಡಿದ್ದ. ಅಲ್ಲಿ ಯುವತಿಯರು, ಮಹಿಳೆಯರು ಇದ್ದುದರಿಂದ ಮುಜುಗರಕ್ಕೊಳಗಾಗಿ ಹಿಂತಿರುಗಿ ಬಂದಿದ್ದನಂತೆ.
ಈ ಬಗ್ಗೆ ಮಹಿಳೆಯರ ಮೂಲಕ ಉಳ್ಳಾಲದಲ್ಲಿ ದೂರು ದಾಖಲಿಸಿದ್ದಲ್ಲದೆ, ಅಸಭ್ಯವಾಗಿ ವರ್ತಿಸಿದ್ದಾಗಿ ಆರೋಪ ಮಾಡಿದ್ದಾರೆ. ಯುವಕ ಉಳ್ಳಾಲ ಪೊಲೀಸರಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸಿದ್ದರೆ ಬೇಕಾದ್ರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಿ ಎಂದು ಗೋಗರೆದಿದ್ದಾನೆ. ಆದರೆ ಪೊಲೀಸರು ಯುವಕನ ಮಾತು ಕೇಳದೆ ಕೋರ್ಟಿಗೆ ಹಾಜರು ಪಡಿಸಲು ಕರೆದೊಯ್ದಿದ್ದಾರೆ. ಅಷ್ಟರಲ್ಲೇ ಪೊಲೀಸ್ ಕಮಿಷನರ್ ಯುವಕನ ಫೋಟೋ ಮತ್ತು ಎಫ್ಐಆರ್ ಕಾಪಿಯನ್ನು ಮೀಡಿಯಾ ಗ್ರೂಪಿನಲ್ಲಿ ಷೇರ್ ಮಾಡಿದ್ದಾರೆ.
Police arrested a youth for behaving indecently with women at Thokottu. The arrested person is identified as Sujith Shetty (26), a resident of Nitte, Karkala. As per the complaint filed by the victim, she and two other women were attending a special programme organised by the Huda Jumma Masjid in Thokottu at around 11.30 pm on Thursday April 28.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm