ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm