ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am