ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm