ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm