ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm