ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm