ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm