ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm