ಬ್ರೇಕಿಂಗ್ ನ್ಯೂಸ್
08-07-22 08:06 pm Source: Vijayakarnataka ಡಿಜಿಟಲ್ ಟೆಕ್
ವಿಶ್ವದಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರನ್ನು ಸುರಕ್ಷಿತವಾಗಿಡಲು ಗೂಗಲ್ ಸಂಸ್ಥೆಯು ತೆಗೆದುಕೊಳ್ಳುವ ಪರಿಣಾಮಕಾರಿ ಕ್ರಮಗಳು ಸಹ ಸೈಬರ್ ಕ್ರಿಮಿಗಳನ್ನು ಹೊಸಕಿಹಾಕಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯ ಡೆವಲಪರ್ಗಳ ರೂಪದಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳನ್ನು ತಲುಪುತ್ತಿರುವ ಹಾಗೂ ಬ್ಯಾಂಕ್ OTP ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವ ಹೊಸ ನಾಲ್ಕು ಕಳ್ಳ ಅಪ್ಲಿಕೇಷನ್ಗಳನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ಗುರುತಿಸಲಾಗಿದ್ದು, ಈಗಾಗಲೇ 100,000+ ಬಳಕೆದಾರರಿಂದ ಡೌನ್ಲೋಡ್ ಮಾಡಲಾಗಿರುವ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ.
ಹೌದು, ಗೂಗಲ್ ಪ್ಲೇ ಸ್ಟೋರ್ನಲ್ಲಿ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಕಂಡುಹಿಡಿಯಲಾಗಿದ್ದು, ಈ ಅಪ್ಲಿಕೇಶನ್ಗಳಲ್ಲಿ ಜೋಕರ್ ಎಂಬ ಮಾಲ್ವೇರ್ ಪತ್ತೆಯಾಗಿದೆ. ಜೋಕರ್ ಮಾಲ್ವೇರ್ ಸಹಾಯದಿಂದ ಬಳಕೆದಾರರ ಓಟಿಪಿ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವುದನ್ನು ಸೈಬರ್ ತಜ್ಷರು ಕಂಡುಹಿಡಿದಿದ್ದಾರೆ. ಇದಾದ ನಂತರ ಈ ಕಳ್ಳ ಅಪ್ಲಿಕೇಶನ್ಗಳ ಕುರಿತು Google ಸಂಸ್ಥೆಯು ಸಹ ತಿಳಿದು, ಈ ಎಲ್ಲಾ ನಾಲ್ಕು ಅಪ್ಲಿಕೇಷನ್ಗಳನ್ನು ತನ್ನ ಗೂಗಲ್ ಪ್ಲೇ ಸ್ಟೋರ್ನಿಂದ ತೆಗೆದುಹಾಕಿದೆ. ಆದರೆ, ಈಗಾಗಲೇ ಈ ನಾಲ್ಕು ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿ ಬಳಸುತ್ತಿರುವ ಗ್ರಾಹಕರು ಈ ಮಾಲ್ವೇರ್-ಸೋಂಕಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಸುರಕ್ಷಿತರಾಗಿರಲು ಕೇಳಿಕೊಳ್ಳಲಾಗಿದೆ.

ಜೋಕರ್ ಮಾಲ್ವೇರ್ ಪತ್ತೆಯಾದ ನಾಲ್ಕು ಅಪ್ಲಿಕೇಶನ್ಗಳು ಇವು.
ಕೆಲವೊಂದು ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು Play Store ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ಪತ್ತೆಹಚ್ಚಲು ಕಷ್ಟವಾಗುತ್ತದೆ. Google ನಿಂದ ಮಾಡಿದ ಅಪ್ಲಿಕೇಶನ್ಗಳ ಸಾಮಾನ್ಯ ಭದ್ರತಾ ಸ್ಕ್ರೀನಿಂಗ್ ಅನ್ನು ಬೈಪಾಸ್ ಮಾಡಲು ಹ್ಯಾಕರ್ಗಳು ಉತ್ತಮ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ನಿಮ್ಮ Android ಸ್ಮಾರ್ಟ್ಫೋನ್ನಲ್ಲಿ ನೀವು ಈ ಮೇಲಿನ ನಾಲ್ಕು ಅಪ್ಲಿಕೇಶನ್ಗಳಲ್ಲಿ ಯಾವುದನ್ನಾದರೂ ಡೌನ್ಲೋಡ್ ಮಾಡಿದ್ದರೆ, ಕೂಡಲೇ ಡಿಲೀಟ್ ಮಾಡಿಬಿಡಿ. ಗೂಗಲ್ Play Store ನಿಂದಲೂ ಅಪರಿಚಿತ ಡೆವಲಪರ್ಗಳು ಹೋಸ್ಟ್ ಮಾಡಿರುವ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರಿಕೆಯನ್ನು ವಹಿಸಿ. ವಿಶ್ವಾಸಾರ್ಹ ಮತ್ತು ಸುರಕ್ಷಿತ ಎಂದು ನಿಮಗೆ ತಿಳಿದಿರುವ ಕಂಪನಿಗಳು ಅಥವಾ ಸಾಕಷ್ಟು ಜನರು ರಿವ್ಯೂ ಮಾಡಿರುವ ಉತ್ತಮ ಅಪ್ಲಿಕೇಷನ್ಗಳನ್ನು ಮಾತ್ರ ಡೌನ್ಲೋಡ್ ಮಾಡಿ.
Four New Malicious Apps Have Been Discovered On The Google Play Store.
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm