ಬ್ರೇಕಿಂಗ್ ನ್ಯೂಸ್
10-10-22 07:37 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಪ್ರಮುಖ ಟೆಲಿಕಾಂ ಕಂಪೆನಿ ರಿಲಯನ್ಸ್ ಜಿಯೋ ಅಕ್ಟೋಬರ್ 5 ರಿಂದ ಭಾರತದಲ್ಲಿ ಪ್ರಾಯೋಗಿಕವಾಗಿ 5G ಸೇವೆಗಳನ್ನು ಆರಂಭಿಸಿದೆ. 2022 ರ ವಿಜಯದಶಮಿ ಹಬ್ಬದ ಶುಭ ದಿನದಂದೇ ಜಿಯೋ ತನ್ನ 'ವೆಲ್ಕಮ್ ಆಫರ್' ಘೋಷಣೆ ಜೊತೆಗೆ ದೇಶದಲ್ಲಿ ಮೊದಲು ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ವಾರಣಾಸಿ ನಾಲ್ಕು ನಗರಗಳಲ್ಲಿ ಜಿಯೋ 5ಜಿ ಸೇವೆಯನ್ನು ಪ್ರಸ್ತುತಪಡಿಸಿದೆ. ಇದೀಗ ಈ ಸೇವೆಯು ಯಾವ ಕನಿಷ್ಠ ಬೆಲೆಯಲ್ಲಿ ದೊರೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಸಹ ಲಭ್ಯವಾಗಿದೆ.
ಹೌದು, ರಿಲಯನ್ಸ್ ಜಿಯೋ ಗ್ರಾಹಕರು 1 Gbps ವೇಗದಲ್ಲಿ 5G ಸೇವೆಗಳನ್ನು ಬಳಸುವುದಕ್ಕಾಗಿ ಕನಿಷ್ಠ 239 ರೂ. ಯೋಜನೆಗೆ ರೀಚಾರ್ಜ್ ಆಗಿರಬೇಕೆಂದು ತಿಳಿದುಬಂದಿದೆ. ಜಿಯೋವಿನ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಗ್ರಾಹಕರು 5G ವೆಲ್ಕಮ್ ಆಫರ್ ಪಡೆಯಲು ಕನಿಷ್ಠ 239 ಅಥವಾ ಹೆಚ್ಚಿನ ಪ್ಲಾನ್ನೊಂದಿಗೆ ರೀಚಾರ್ಜ್ ಮಾಡಿಸಿರಬೇಕು ಎಂದು ಜಿಯೋ ಹೇಳಿದೆ. ಆದರೆ, ಇದು ಜಿಯೋ 5G ಸೇವೆಗಳನ್ನು ಪಡೆಯಲು ಪಾವತಿಸಬೇಕಾದ ನಿರ್ಧಿಷ್ಟ ಬೆಲೆಯಲ್ಲ ಎಂದು ಹೇಳಲಾಗಿದೆ.

ಇದನ್ನು ಸುಲಭವಾಗಿ ಹೇಳಬೇಕೆಂದರೆ, ಪ್ರಸ್ತುತ ಜಿಯೋ 4G ಸೇವೆಯನ್ನು ಬಳಸುತ್ತಿರುವ ಗ್ರಾಹಕರು 5G ಸೇವೆಗಳನ್ನು ಬಳಸುವುದಕ್ಕಾಗಿ ಕನಿಷ್ಠ 239 ರೂ. ಯೋಜನೆಗೆ ರೀಚಾರ್ಜ್ ಮಾಡಿಸಿರಬೇಕು. 5G ಸಾಮರ್ಥ್ಯದ ಸ್ಮಾರ್ಟ್ಫೋನ್ ಹೊಂದಿರುವ ಜಿಯೋ 4G ಗ್ರಾಹಕರು 5G ಸೇವೆ ಪಡೆಯಲು ಕಂಪೆನಿಯಿಂದ ಆಹ್ವಾನವನ್ನು ಸ್ವೀಕರಿಸುತ್ತಾರೆ. ಈ ವೇಳೆ ಅವರು 239 ರೂ.ಗಿಂತ ಹೆಚ್ಚಿನ ಬೆಲೆಯ ಯೋಜನೆಗೆ ಗ್ರಾಹಕರಾಗಿದ್ದರೆ ಮಾತ್ರ ಜಿಯೋ 5G ಸೇವೆಗಳನ್ನು ಪಡೆಯಲು ಸಾಧ್ಯವಾಗಲಿದೆ.

ಜಿಯೋ ಆರಂಭಿಸಿರುವ ಈ ಪ್ರಾಯೋಗಿಕ 5ಜಿ ಸೇವೆಯಲ್ಲಿ ತನ್ನ ಬಳಕೆದಾರರು ತಮ್ಮ ಜೊತೆ ಇರುವ ಸಿಮ್ ಕಾರ್ಡ್ ಅಥವಾ ಮೊಬೈಲ್ ಬದಲಿಸದೆಯೇ ಈ 5ಜಿ ನೆಟ್ವರ್ಕ್ ಬಳಸಬಹುದು. ಆದರೆ, 5ಜಿ ಸೇವೆಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಿಲ್ಲ. ಇದಕ್ಕಾಗಿ ಜಿಯೋ MyJio ಅಪ್ಲಿಕೇಶನ್ನ್ ಮೂಲಕ ಜಿಯೋದ 5G ಸೇವೆಯನ್ನು ಪಡೆಯುವಂತೆ ಆಹ್ವಾನವನ್ನು ಕಳುಹಿಸುತ್ತಿದೆ. ಇದನ್ನು ಕ್ಲಿಕ್ ಮಾಡುವ ಮೂಲಕ 1Gbps + ವೇಗದಲ್ಲಿ 5G ಸೇವೆಗಳನ್ನು ಪಡೆಯಲು ಅವಕಾಶ ಸಿಗಲಿದೆ.
ನಿಮ್ಮ 4G ಡೇಟಾ ಏನಾಗುತ್ತದೆ?
ನೀವು ಕನಿಷ್ಠ 239 ರೂ. ಯೋಜನೆಗೆ ರೀಚಾರ್ಜ್ ಮಾಡಿಸಿ 4G ಸೇವೆಯನ್ನು ಬಳಸುತ್ತಿದ್ದೀರಾ ಎಂದುಕೊಳ್ಳಿ. ಇದೀಗ ನೀವು ಜಿಯೋ 5G ಸೇವೆ ಪಡೆಯಲು ಅರ್ಹರಾಗುತ್ತೀರಾ. ನೀವು ಜಿಯೋವಿನ ಆಹ್ವಾನವನ್ನು ಪಡೆದು 5G ಗೆ ಬದಲಾಯಿಸಿದಾಗ, ಈ ಯೋಜನೆಯು ಅನಿಯಮಿತ 5G ಡೇಟಾವನ್ನು ನೀಡುವ ಯೋಜನೆಯಾಗಿ ಬದಲಾಗುತ್ತದೆ. ಅಂದರೆ, ನೀವು ನಿಮ್ಮ ಪ್ರಸ್ತುತ ಯೋಜನೆಯು ಹೊಂದಿರುವ ವ್ಯಾಲಿಡಿಟಿವರೆಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸಬಹುದು. ಅದು ಕೂಡ 1Gbps + ವೇಗದಲ್ಲಿ.!
Reliance Jio 5g Will Only Work If You Recharge With This Plan.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm