ಬ್ರೇಕಿಂಗ್ ನ್ಯೂಸ್
21-10-22 08:04 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಲ್ಯಾಪ್ಟಾಪ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಕಾತುರವಾಗಿರುವ ಜಿಯೋವಿನ ಮೊಟ್ಟ ಮೊದಲ ಲ್ಯಾಪ್ಟಾಪ್ 'ಜಿಯೋಬುಕ್' (JioBook) ದೇಶದಲ್ಲಿ ಇಂದಿನಿಂದ ಮಾರಾಟಕ್ಕೆ ಬಂದಿದೆ. ದೇಶದ ಜನಪ್ರಿಯ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಒಂದಾದ ರಿಲಯನ್ಸ್ ಡಿಜಿಟಲ್ ವೆಬ್ಸೈಟ್ನಲ್ಲಿ ಜಿಯೋಬುಕ್ ಲ್ಯಾಪ್ಟಾಪನ್ನು ಮಾರಾಟಕ್ಕಿಡಲಾಗಿದ್ದು, 15,000 ರೂ. ಬೆಲೆಯಲ್ಲಿ ಜಿಯೋಬುಕ್ ಸಾಧನವನ್ನು ಖರೀದಿಸಬಹುದು ಎಂದು ರಿಲಯನ್ಸ್ ಜಿಯೋ ಸಂಸ್ಥೆ ತಿಳಿಸಿದೆ.
ಇದೇ ತಿಂಗಳ ಆರಂಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ ಜಿಯೋ ತನ್ನ ಮೊಟ್ಟ ಮೊದಲ ಲ್ಯಾಪ್ಟಾಪ್ ಜಿಯೋಬುಕ್ ಸಾಧನವನ್ನು ಬಿಡುಗಡೆಗೊಳಿಸಿತ್ತು. ಇದೀಗ ರಿಲಯನ್ಸ್ ಡಿಜಿಟಲ್ನ ವೆಬ್ಸೈಟ್ ಮೂಲಕ ಭಾರತೀಯ ಗ್ರಾಹಕರಿಗೆ ಲಭ್ಯವಾಗುವಂತೆ ಜಿಯೋಬುಕ್ ಸಾಧನವನ್ನು ಲೈವ್ನಲ್ಲಿ ಇಡಲಾಗಿದ್ದು, 19,500 ರೂ. ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಈ ಲ್ಯಾಪ್ಟಾಪ್ ಅನ್ನು ಗ್ರಾಹಕರು ಇದೀಗ 15,799 ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಜಿಯೋಬುಕ್ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎನಿಸುವ ಬಜೆಟ್ ಪ್ರೈಸ್ನ ಒಂದು ಲ್ಯಾಪ್ಟಾಪ್ ಆಗಿದ್ದು, ಜಾಗತಿಕ ಟೆಕ್ ದೈತ್ಯ ಕಂಪೆನಿಗಳಾದ Qualcomm ಮತ್ತು Microsoft ಸಹಭಾಗಿತ್ವದಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯು ಈ ಜಿಯೋ ಲ್ಯಾಪ್ಟಾಪ್ ಅನ್ನು ಅಭಿವೃದ್ಧಿಪಡಿಸಿದೆ. ಹಾಗಾದರೆ ನೂತನ ಜಿಯೋ ಲ್ಯಾಪ್ಟಾಪ್ ಹೇಗಿದೆ?, ಈ ಲ್ಯಾಪ್ಟಾಪ್ ಮೇಲೆ ಏನೆಲ್ಲಾ ಕೊಡುಗೆಗಳನ್ನು ನೀಡಲಾಗಿದೆ ಎಂಬುದನ್ನು ನೋಡೋಣ ಬನ್ನಿ.

ಜಿಯೋಬುಕ್ ಲ್ಯಾಪ್ಟಾಪ್ನ ವೈಶಿಷ್ಟ್ಯಗಳು
ಭಾರತದಲ್ಲಿ ಜಿಯೋಬುಕ್ ಸಾಧನದ ಬೆಲೆ ಮತ್ತು ಲಭ್ಯತೆ
ಮೊದಲೇ ಹೇಳಿದಂತೆ, ದೇಶದಲ್ಲಿ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಇದೀಗ 15,799 ರೂ. ಗಳ ಬೆಲೆಯಲ್ಲಿ ಮಾರಾಟಕ್ಕಿಡಲಾಗಿದೆ. ಈ ಸಾಧನದ ಮೇಲೆ Axis, Kotak, ICICI, HDFC, AU, INDUSIND, DB ಮತ್ತು ಇತರ ಪ್ರಮುಖ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳೊಂದಿಗೆ 10 ಪ್ರತಿಶತ ತ್ವರಿತ ರಿಯಾಯಿತಿಯನ್ನು ಸಹ ಒದಗಿಸಲಾಗಿದೆ. ಗ್ರಾಹಕರು ರಿಲಯನ್ಸ್ ಡಿಜಿಟಲ್ ಸ್ಟೋರ್ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಖರೀದಿಸಬಹುದು. ನಂತರ ಹತ್ತಿರದ Jio ಸ್ಟೋರ್ಗೆ ಭೇಟಿ ನೀಡಿ, ಜಿಯೋಬುಕ್ ಲ್ಯಾಪ್ಟಾಪ್ನಲ್ಲಿ ಇರುವ ಅಂತರ್ಗತ SIM ಕಾರ್ಡ್ ಅನ್ನು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಜಿಯೋ ಸಂಸ್ಥೆ ತಿಳಿಸಿದೆ.
Jiobook Laptop Now Available For Sale In India All Details Here.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm