ಬ್ರೇಕಿಂಗ್ ನ್ಯೂಸ್
            
                        21-10-22 08:04 pm Source: Vijayakarnataka ಡಿಜಿಟಲ್ ಟೆಕ್
            ಭಾರತದ ಲ್ಯಾಪ್ಟಾಪ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಕಾತುರವಾಗಿರುವ ಜಿಯೋವಿನ ಮೊಟ್ಟ ಮೊದಲ ಲ್ಯಾಪ್ಟಾಪ್ 'ಜಿಯೋಬುಕ್' (JioBook) ದೇಶದಲ್ಲಿ ಇಂದಿನಿಂದ ಮಾರಾಟಕ್ಕೆ ಬಂದಿದೆ. ದೇಶದ ಜನಪ್ರಿಯ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಒಂದಾದ ರಿಲಯನ್ಸ್ ಡಿಜಿಟಲ್ ವೆಬ್ಸೈಟ್ನಲ್ಲಿ ಜಿಯೋಬುಕ್ ಲ್ಯಾಪ್ಟಾಪನ್ನು ಮಾರಾಟಕ್ಕಿಡಲಾಗಿದ್ದು, 15,000 ರೂ. ಬೆಲೆಯಲ್ಲಿ ಜಿಯೋಬುಕ್ ಸಾಧನವನ್ನು ಖರೀದಿಸಬಹುದು ಎಂದು ರಿಲಯನ್ಸ್ ಜಿಯೋ ಸಂಸ್ಥೆ ತಿಳಿಸಿದೆ.
ಇದೇ ತಿಂಗಳ ಆರಂಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ ಜಿಯೋ ತನ್ನ ಮೊಟ್ಟ ಮೊದಲ ಲ್ಯಾಪ್ಟಾಪ್ ಜಿಯೋಬುಕ್ ಸಾಧನವನ್ನು ಬಿಡುಗಡೆಗೊಳಿಸಿತ್ತು. ಇದೀಗ ರಿಲಯನ್ಸ್ ಡಿಜಿಟಲ್ನ ವೆಬ್ಸೈಟ್ ಮೂಲಕ ಭಾರತೀಯ ಗ್ರಾಹಕರಿಗೆ ಲಭ್ಯವಾಗುವಂತೆ ಜಿಯೋಬುಕ್ ಸಾಧನವನ್ನು ಲೈವ್ನಲ್ಲಿ ಇಡಲಾಗಿದ್ದು, 19,500 ರೂ. ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಈ ಲ್ಯಾಪ್ಟಾಪ್ ಅನ್ನು ಗ್ರಾಹಕರು ಇದೀಗ 15,799 ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಜಿಯೋಬುಕ್ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎನಿಸುವ ಬಜೆಟ್ ಪ್ರೈಸ್ನ ಒಂದು ಲ್ಯಾಪ್ಟಾಪ್ ಆಗಿದ್ದು, ಜಾಗತಿಕ ಟೆಕ್ ದೈತ್ಯ ಕಂಪೆನಿಗಳಾದ Qualcomm ಮತ್ತು Microsoft ಸಹಭಾಗಿತ್ವದಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯು ಈ ಜಿಯೋ ಲ್ಯಾಪ್ಟಾಪ್ ಅನ್ನು ಅಭಿವೃದ್ಧಿಪಡಿಸಿದೆ. ಹಾಗಾದರೆ ನೂತನ ಜಿಯೋ ಲ್ಯಾಪ್ಟಾಪ್ ಹೇಗಿದೆ?, ಈ ಲ್ಯಾಪ್ಟಾಪ್ ಮೇಲೆ ಏನೆಲ್ಲಾ ಕೊಡುಗೆಗಳನ್ನು ನೀಡಲಾಗಿದೆ ಎಂಬುದನ್ನು ನೋಡೋಣ ಬನ್ನಿ.

ಜಿಯೋಬುಕ್ ಲ್ಯಾಪ್ಟಾಪ್ನ ವೈಶಿಷ್ಟ್ಯಗಳು
ಭಾರತದಲ್ಲಿ ಜಿಯೋಬುಕ್ ಸಾಧನದ ಬೆಲೆ ಮತ್ತು ಲಭ್ಯತೆ
ಮೊದಲೇ ಹೇಳಿದಂತೆ, ದೇಶದಲ್ಲಿ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಇದೀಗ 15,799 ರೂ. ಗಳ ಬೆಲೆಯಲ್ಲಿ ಮಾರಾಟಕ್ಕಿಡಲಾಗಿದೆ. ಈ ಸಾಧನದ ಮೇಲೆ Axis, Kotak, ICICI, HDFC, AU, INDUSIND, DB ಮತ್ತು ಇತರ ಪ್ರಮುಖ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳೊಂದಿಗೆ 10 ಪ್ರತಿಶತ ತ್ವರಿತ ರಿಯಾಯಿತಿಯನ್ನು ಸಹ ಒದಗಿಸಲಾಗಿದೆ. ಗ್ರಾಹಕರು ರಿಲಯನ್ಸ್ ಡಿಜಿಟಲ್ ಸ್ಟೋರ್ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಖರೀದಿಸಬಹುದು. ನಂತರ ಹತ್ತಿರದ Jio ಸ್ಟೋರ್ಗೆ ಭೇಟಿ ನೀಡಿ, ಜಿಯೋಬುಕ್ ಲ್ಯಾಪ್ಟಾಪ್ನಲ್ಲಿ ಇರುವ ಅಂತರ್ಗತ SIM ಕಾರ್ಡ್ ಅನ್ನು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಜಿಯೋ ಸಂಸ್ಥೆ ತಿಳಿಸಿದೆ.
            
            
            Jiobook Laptop Now Available For Sale In India All Details Here.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm