ಬ್ರೇಕಿಂಗ್ ನ್ಯೂಸ್
16-11-22 07:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಆಪಲ್ ಐಫೋನ್ ಸ್ಮಾರ್ಟ್ಫೋನ್ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಬೆಂಗಳೂರು ನಗರದ ಸಮೀಪವಿರುವ ಹೊಸೂರಿನಲ್ಲಿ ಆರಂಭವಾಗಲಿದೆ ಎಂದು ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. ಮಂಗಳವಾರದಂದು ನಡೆದ ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಈ ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಆಪಲ್ ಐಫೋನ್ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್ ಶಿಘ್ರದಲ್ಲೇ ಐಫೋನ್ಗಳನ್ನು ತಯಾರಿಲಿದೆ. ಈ ಒಂದೇ ಘಟಕದಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ. ಈ 60,000 ಉದ್ಯೋಗಿಗಳಲ್ಲಿ ಮೊದಲ 6,000 ಉದ್ಯೋಗಿಗಳು ರಾಂಚಿ ಮತ್ತು ಹತ್ತಿರದ ಸ್ಥಳಗಳ ಹಜಾರಿಬಾಗ್ ಬುಡಕಟ್ಟು ಸಹೋದರಿಯರು ಇರಲಿದ್ದಾರೆ. ಆದ್ದರಿಂದ, ಹಜಾರಿಬಾಗ್ ಸಹೋದರಿಯರಿಗೆ ಆಪಲ್ ಐಫೋನ್ ತಯಾರಿಕೆಯ ತರಬೇತಿ ನೀಡಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
ಚೀನಾದಲ್ಲಿನ ಕೋವಿಡ್ ನಿರ್ಬಂಧಗಳು, ರಾಜಕೀಯ ಸಮಸ್ಯೆಗಳು ಮತ್ತು ಆರ್ಥಿಕ ಚಟುವಟಿಕೆ ಕುಸಿತದ ಪರಿಣಾಮಗಳು ಆಪಲ್ ಕಂಪೆನಿಯ ಮೇಲೆ ನೇರ ಪರಿಣಾಮ ಬೀರಿವೆ. ಈ ಆಂತಕಗಳ ನಡುವೆ ಚೀನಾದಲ್ಲಿ ಐಫೋನ್ಗಳ ಉತ್ಪಾದನೆ ಮತ್ತು ಪೂರೈಕೆ ಕಷ್ಟ ಸಾಧ್ಯ. ಭವಿಷ್ಯದಲ್ಲೂ ಈ ಸಮಸ್ಯೆಗಳಿಗೆ ಕೊನೆ ಇಲ್ಲ ಎಂದರಿತಿರುವ ಆಪಲ್ ಸಂಸ್ಥೆ ಭಾರತದಲ್ಲಿ ಹೆಚ್ಚು ಐಫೋನ್ಗಳನ್ನು ಉತ್ಪಾದಿಸುವ ಹಾಗೂ ರಫ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಕ್ಕಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಆಯ್ದುಕೊಂಡಿದೆ. ಪ್ರಸ್ತುತ ಭಾರತದಲ್ಲಿ ಫಾಕ್ಸ್ಕಾನ್ ಘಟಕದಲ್ಲಿ ಐಫೋನ್ಗಳನ್ನು ಉತ್ಪಾದಿಸಲಾಗುತ್ತಿದೆ.
ಇತ್ತೀಚಿಗಷ್ಟೆ, ಭಾರತದಲ್ಲಿ ಆಪಲ್ ಹೊಂದಿರುವ ಫಾಕ್ಸ್ಕಾನ್ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲು ಮತ್ತು ವಿಶ್ವದಾದ್ಯಂತ ರಪ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಲ್ಲದೇ, ಚೀನಾ ಮೇಲಿನ ತನ್ನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಆಪಲ್ ಭಾರತದಲ್ಲಿ ಕೆಲವು ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲಿದೆ ಎಂದು ಜನಪ್ರಿಯ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ತಮ್ಮ ಟ್ವೀಟ್ಗಳಲ್ಲಿ ಉಲ್ಲೇಖಿಸಿದ್ದರು. ಇತ್ತೀಚಿನ ಭೌಗೋಳಿಕ ರಾಜಕೀಯ ವಿಷಯಗಳ ಹಿನ್ನೆಲೆಯಲ್ಲಿ ಆಪಲ್ ಈ ತೀರ್ಮಾನಕ್ಕೆ ಬಂದಿದೆ ಎಂದು ಮಿಂಗ್-ಚಿ ಕುವೊ ಅವರು ಹೇಳಿದ್ದರು.
Biggest Iphone Manufacturing Unit To Come Up Near Bengaluru.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm