ಬ್ರೇಕಿಂಗ್ ನ್ಯೂಸ್
16-11-22 07:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಆಪಲ್ ಐಫೋನ್ ಸ್ಮಾರ್ಟ್ಫೋನ್ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಬೆಂಗಳೂರು ನಗರದ ಸಮೀಪವಿರುವ ಹೊಸೂರಿನಲ್ಲಿ ಆರಂಭವಾಗಲಿದೆ ಎಂದು ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. ಮಂಗಳವಾರದಂದು ನಡೆದ ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಈ ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಆಪಲ್ ಐಫೋನ್ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್ ಶಿಘ್ರದಲ್ಲೇ ಐಫೋನ್ಗಳನ್ನು ತಯಾರಿಲಿದೆ. ಈ ಒಂದೇ ಘಟಕದಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ. ಈ 60,000 ಉದ್ಯೋಗಿಗಳಲ್ಲಿ ಮೊದಲ 6,000 ಉದ್ಯೋಗಿಗಳು ರಾಂಚಿ ಮತ್ತು ಹತ್ತಿರದ ಸ್ಥಳಗಳ ಹಜಾರಿಬಾಗ್ ಬುಡಕಟ್ಟು ಸಹೋದರಿಯರು ಇರಲಿದ್ದಾರೆ. ಆದ್ದರಿಂದ, ಹಜಾರಿಬಾಗ್ ಸಹೋದರಿಯರಿಗೆ ಆಪಲ್ ಐಫೋನ್ ತಯಾರಿಕೆಯ ತರಬೇತಿ ನೀಡಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಚೀನಾದಲ್ಲಿನ ಕೋವಿಡ್ ನಿರ್ಬಂಧಗಳು, ರಾಜಕೀಯ ಸಮಸ್ಯೆಗಳು ಮತ್ತು ಆರ್ಥಿಕ ಚಟುವಟಿಕೆ ಕುಸಿತದ ಪರಿಣಾಮಗಳು ಆಪಲ್ ಕಂಪೆನಿಯ ಮೇಲೆ ನೇರ ಪರಿಣಾಮ ಬೀರಿವೆ. ಈ ಆಂತಕಗಳ ನಡುವೆ ಚೀನಾದಲ್ಲಿ ಐಫೋನ್ಗಳ ಉತ್ಪಾದನೆ ಮತ್ತು ಪೂರೈಕೆ ಕಷ್ಟ ಸಾಧ್ಯ. ಭವಿಷ್ಯದಲ್ಲೂ ಈ ಸಮಸ್ಯೆಗಳಿಗೆ ಕೊನೆ ಇಲ್ಲ ಎಂದರಿತಿರುವ ಆಪಲ್ ಸಂಸ್ಥೆ ಭಾರತದಲ್ಲಿ ಹೆಚ್ಚು ಐಫೋನ್ಗಳನ್ನು ಉತ್ಪಾದಿಸುವ ಹಾಗೂ ರಫ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಕ್ಕಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಆಯ್ದುಕೊಂಡಿದೆ. ಪ್ರಸ್ತುತ ಭಾರತದಲ್ಲಿ ಫಾಕ್ಸ್ಕಾನ್ ಘಟಕದಲ್ಲಿ ಐಫೋನ್ಗಳನ್ನು ಉತ್ಪಾದಿಸಲಾಗುತ್ತಿದೆ.

ಇತ್ತೀಚಿಗಷ್ಟೆ, ಭಾರತದಲ್ಲಿ ಆಪಲ್ ಹೊಂದಿರುವ ಫಾಕ್ಸ್ಕಾನ್ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲು ಮತ್ತು ವಿಶ್ವದಾದ್ಯಂತ ರಪ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಲ್ಲದೇ, ಚೀನಾ ಮೇಲಿನ ತನ್ನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಆಪಲ್ ಭಾರತದಲ್ಲಿ ಕೆಲವು ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲಿದೆ ಎಂದು ಜನಪ್ರಿಯ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ತಮ್ಮ ಟ್ವೀಟ್ಗಳಲ್ಲಿ ಉಲ್ಲೇಖಿಸಿದ್ದರು. ಇತ್ತೀಚಿನ ಭೌಗೋಳಿಕ ರಾಜಕೀಯ ವಿಷಯಗಳ ಹಿನ್ನೆಲೆಯಲ್ಲಿ ಆಪಲ್ ಈ ತೀರ್ಮಾನಕ್ಕೆ ಬಂದಿದೆ ಎಂದು ಮಿಂಗ್-ಚಿ ಕುವೊ ಅವರು ಹೇಳಿದ್ದರು.
Biggest Iphone Manufacturing Unit To Come Up Near Bengaluru.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm