ಬ್ರೇಕಿಂಗ್ ನ್ಯೂಸ್
18-12-20 04:19 pm Source: GIZBOT Mutthuraju H M ಡಿಜಿಟಲ್ ಟೆಕ್
ಸರ್ಚ್ ಇಂಜಿನ್ ದೈತ್ಯ ಗೂಗಲ್ ಹಾಗೂ ಸೊಶೀಯಲ್ ಮೀಡಿಯಾ ದೈತ್ಯ ಫೇಸ್ಬುಕ್ ವಿರುದ್ದ ಅಮೆರಿಕದ 10 ರಾಜ್ಯಗಳು ದಾವೆ ಹೂಡಿವೆ. ಮಾರುಕಟ್ಟೆಯಲ್ಲಿ ಪ್ರತಿಸ್ಫರ್ದಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ಗೂಗಲ್ ಹಾಗೂ ಫೇಸ್ಬುಕ್ ಅಕ್ರಮ ಒಪ್ಪಂದ ಮಾಡಿಕೊಂಡಿವೆ ಎಂದು ದೂರಲಾಗಿದೆ.
ಹೌದು, ಕೆಲ ದಿನಗಳ ಹಿಂದೆಯಷ್ಟೇ ಏಕಸ್ವಾಮ್ಯ ನೀತಿ ದುರುಪಯೋಗ ಮಾಡಿಕೊಂಡಿದೆ ಎಂದು ಫೇಸ್ಬುಕ್ ವಿರುದ್ದ ದೂರು ದಾಖಲಿಸಿದ್ದ ಅಮೆರಿಕದ ರಾಜ್ಯಗಳು, ಇದೀಗ ಗೂಗಲ್ ವಿರುದ್ದ ಕೂಡ ದಾವೆ ಹೂಡಿವೆ. ಜಾಹಿರಾತು ಮಾರುಕಟ್ಟೆಯಲ್ಲಿ ಸ್ಪರ್ಧೆಯನ್ನು ತೊಡೆದುಹಾಕಲು ಗೂಗಲ್ ಫೇಸ್ಬುಕ್ ಜೊತೆಗೆ ಅಕ್ರಮ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿ ಯುಎಸ್ ರಾಜ್ಯಗಳು ಮೂರನೇ ಆಂಟಿಟ್ರಸ್ಟ್ ಮೊಕದ್ದಮೆಯನ್ನು ಹೂಡಿವೆ.
ಗೂಗಲ್ನ ಕೆಲವು ನಿರೀಕ್ಷಿತ ಕ್ರಮಗಳು ಅದರ ಸಾಮಾನ್ಯ ಹುಡುಕಾಟ ಏಕಸ್ವಾಮ್ಯವನ್ನು ರಕ್ಷಿಸಿವೆ ಮತ್ತು ಪ್ರತಿಸ್ಪರ್ಧಿಗಳನ್ನು ಹೊರಗಿಟ್ಟಿವೆ. ಸ್ಪರ್ಧಾತ್ಮಕ ಆಯ್ಕೆಗಳ ಪ್ರಯೋಜನಗಳನ್ನು ಗ್ರಾಹಕರಿಂದ ಕಸಿದುಕೊಳ್ಳುತ್ತಿದೆ. ಇದರಿಂದ ಗ್ರಾಹಕರಿಗೆ ಹೊಸತನವನ್ನು ಅನುಭವಿಸಲು ಸಾಧ್ಯವನ್ನು ನೀಡುತ್ತಿಲ್ಲ. ಹೊಸ ಪ್ರವೇಶ ಅಥವಾ ವಿಸ್ತರಣೆಯನ್ನು ದುರ್ಬಲಗೊಳಿಸುತ್ತವೆ ಎಂದು ದೂರನ್ನು ನೀಡಲಾಗಿದೆ. ಇನ್ನು ಟೆಕ್ಸಾಸ್ ರಾಜ್ಯ ಈ ಮೊಕದ್ದಮೆಯ ನೇತೃತ್ವವನ್ನು ವಹಿಸಿದ್ದು, ಗೂಗಲ್ ವಿರುದ್ಧದ ಫೆಡರಲ್ ಪ್ರಕರಣದೊಂದಿಗೆ ಏಕೀಕರಿಸುವಂತೆ ಕೇಳಿದೆ.
ಗ್ರಾಹಕ ವ್ಯಾಪಾರ ಹಿತಾಸಕ್ತಿಗಳನ್ನು ಪರಿಗಣಿಸದೆ ಗೂಗಲ್ ತನ್ನ ಸರ್ಚ್ ಎಂಜಿನ್ ಅನ್ನು ಮರುವಿನ್ಯಾಸಗೊಳಿಸುವಂತೆ ಒತ್ತಾಯಿಸಲು ಈ ದೂರಿನಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ ಗೂಗಲ್ ಸ್ಪರ್ಧಿಗಳನ್ನು ಮಟ್ಟಹಾಕಲು ಒಪ್ಪಂದಗಳನ್ನು ಮಾಡಿಕೊಂಡಿದೆ. ಅದರ ಹುಡುಕಾಟ ಮತ್ತು ಜಾಹೀರಾತು ವ್ಯವಸ್ಥೆಗಳನ್ನು ಸ್ಮಾರ್ಟ್ ಸ್ಪೀಕರ್ಗಳು, ಕಾರುಗಳು, ಸ್ಮಾರ್ಟ್ಫೋನ್ಗಳು ಮತ್ತು ಹೆಚ್ಚಿನವುಗಳಲ್ಲಿ ಪಡೆಯುವಾಗ ಪ್ರತಿಸ್ಪರ್ಧಿಗಳನ್ನು ಲಾಕ್ ಔಟ್ ಮಾಡಲು ಪ್ರಯತ್ನಿಸಿದೆ ಎಂದು ಹೇಳಲಾಗಿದೆ.
ಇನ್ನು ಗೂಗಲ್ ಜಾಹೀರಾತು ಆದಾಯವು ನಿರಂತರವಾಗಿ ಬೆಳೆಯುತ್ತಲೇ ಇದ್ದರೂ, ಯುಎಸ್ ಆನ್ಲೈನ್ ಜಾಹೀರಾತು ಮಾರುಕಟ್ಟೆಯಲ್ಲಿ ಅದರ ಪಾಲು ಫೇಸ್ಬುಕ್, ಅಮೆಜಾನ್ ಮತ್ತು ಇತರ ಸ್ಪರ್ಧಿಗಳ ಒತ್ತಡಕ್ಕೆ ಮಣಿಯುತ್ತಿದೆ ಎಂದು ಇಮಾರ್ಕೆಟರ್ ಹೇಳಿದೆ. ಯುಎಸ್ ಜಾಹೀರಾತು ಮಾರುಕಟ್ಟೆಯ ಒಟ್ಟು ಶೇಕಡಾ 42.4 ಬಿಲಿಯನ್ (ಸರಿಸುಮಾರು 3,11,700 ಕೋಟಿ ರೂ.) ಗೆ ಈ ವರ್ಷ ಗೂಗಲ್ ಕೇವಲ 30 ಪ್ರತಿಶತದಷ್ಟು ಪಡೆದುಕೊಂಡಿದೆ ಎಂದು ಮಾರುಕಟ್ಟೆ ಟ್ರ್ಯಾಕರ್ ನಿರೀಕ್ಷಿಸಿದ್ದಾರೆ.
This News Article is a Copy of GIZBOT
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm