ಬ್ರೇಕಿಂಗ್ ನ್ಯೂಸ್
24-12-20 03:29 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ದಿನಮಾನಗಳಲ್ಲಿ ಭಾರತದ ಗ್ರಾಮೀಣ ವಲಯವು ಡಿಜಿಟಲೀಕರಣ ಮತ್ತು ತಂತ್ರಜ್ಞಾನದತ್ತ ವೇಗವಾಗಿ ಸಾಗುತ್ತಿದೆ. ದೇಶದ ಪ್ರಮುಖ ಆರ್ಥಿಕ ಮೂಲವಾಗಿರುವ ವ್ಯವಸಾಯ ಕ್ಷೇತ್ರದಲ್ಲಿಯೂ ಹೊಸ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಇತ್ತೀಚಿಗೆ ದೇಶದ ಯುವಜನತೆ ಸಹ ಕೃಷಿ ಚಟುವಟಿಕೆಗಳತ್ತ ಹೆಚ್ಚು ಒಲವು ತೋರಿಸುತ್ತಿದ್ದು, ಹೊಸ ಮಾದರಿಯ ತಂತ್ರಜ್ಞಾನಗಳ ಅಳವಡಿಕೆ ಮಾಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಹಲವು ಅಪ್ಲಿಕೇಶನ್ಗಳು ಕೆಲಸ ಮಾಡುತ್ತಿವೆ.
ಹೌದು, ಭಾರತದ ಗ್ರಾಮೀಣ ಭಾಗದಲ್ಲಿ ಬಹುತೇಕ ಕುಟುಂಬಗಳು ಕೃಷಿಯನ್ನು ಉದ್ಯೋಗವೆಂದು ಭಾವಿಸದೆ, ಜೀವನವಾಗಿ ಸ್ವೀಕರಿಸಿದ್ದಾರೆ. ಈ ವ್ಯವಸ್ಥೆಗೆ ಗೌರವವಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲಕರವಾಗುವ ಅಪ್ಲಿಕೇಶನ್ಗಳು ಕಾರ್ಯನಿರ್ವಹಿಸುತ್ತಿವೆ. ಯಾವುದೇ ಬೆಳೆ ಅಥವಾ ತರಕಾರಿಗಳ ಕೃಷಿ, ಬಿತ್ತನೆ ಅಥವಾ ಕೊಯ್ಲು ಸರಿಯಾದ ವೈಜ್ಞಾನಿಕ ವಿಧಾನವನ್ನು ಸೂಚಿಸುವ ಆಪ್ಗಳು ಇವೆ. ಹಾಗೆಯೇ ಕೀಟಗಳು ಅಥವಾ ಕೀಟಗಳ ದಾಳಿಗೆ ಸಂಬಂಧಿಸಿದ ಯಾವುದೇ ಕೃಷಿ ಸಮಸ್ಯೆಗಳನ್ನು ಪರಿಹರಿಸಲು ಆಪ್ಗಳು ಇವೆ. ಹೀಗಾಗಿ ಕೃಷಿ ಆಪ್ಗಳು ರೈತರ ಆಪ್ತನಂತೆ ನೆರವಾಗಲಿವೆ.
ಕೃಷಿ ಕಿಸಾನ್-Krishi Kisan
ಕೃಷಿ ಕಿಸಾನ್ ಆಪ್ ರೈತರಿಗಾಗಿ ರೂಪಿಸಲಾಗಿದೆ. ಈ ಆಪ್ನಲ್ಲಿ ಕೃಷಿಗೆ ಸಂಬಂಧಿಸಿದ ಹೊಸ ತಂತ್ರಜ್ಞಾನಗಳ ಬಗ್ಗೆ, ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಹಾಗೆಯೇ ರೈತರಿಗೆ ಬೆಳೆಗಳ ಬಗ್ಗೆ, ಬೀಜ ಬಿತ್ತುವಿಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಜಿಯೋ-ಫೆನ್ಸಿಂಗ್ ಹಾಗೂ ಜಿಯೋ ಟ್ಯಾಗಿಂಗ್ ಕುರಿತಾಗಿಯು ಅಗತ್ಯ ನೆರವು ನೀಡಲಿದೆ.
ಕಿಸಾನ್ ಸುವಿಧಾ-Kisan Suvidha
ಕಿಸಾನ್ ಸುವಿಧಾ ಅಪ್ಲಿಕೇಶನ್ ಅನ್ನು ಭಾರತ ಸರ್ಕಾರದಿಂದ ಅಭಿವೃದ್ಧಿಪಡಿಸಿ ಅನಾವರಣ ಮಾಡಲಾಗಿದೆ. ಈ ಆಪ್ನಲ್ಲಿ ರೈತರಿಗೆ ಪ್ರಸ್ತುತ ಮತ್ತು ಮುಂದಿನ 5 ದಿನಗಳ ಹವಾಮಾನದ ಮಾಹಿತಿಯನ್ನು ನೀಡಲಾಗುತ್ತದೆ. ಸ್ಥಳೀಯ ಡೀಲರ್ಗಳು, ಮಾರುಕಟ್ಟೆ, ಕೃಷಿ ಸಲಹೆಗಾರರ ಬಗ್ಗೆ, ಕೃಷಿ ರಕ್ಷಣೆ, ಐಪಿಎಮ್ ಪ್ರಯೋಗಗಳನ್ನು ರೈತರಿಗೆ ನೇರವಾಗಿ ನೀಡುತ್ತದೆ.
ಕೃಷಿ ಮಿತ್ರ-Krishi Mitra
ಕನ್ನಡದಲ್ಲಿಯೇ ಲಭ್ಯವಿರುವ ಆಪ್ ಇದಾಗಿದೆ. ವಿವಿಧ ಪತ್ರಿಕೆಗಳಲ್ಲಿ ಬರುವ ಕೃಷಿ ಸಂಬಂಧಿತ ವರದಿಗಳನ್ನು ನೀಡುತ್ತದೆ. ನಿಮ್ಮ ಪಹಣಿಯನ್ನು ಹುಡುಕುವ ಆಯ್ಕೆ ನಿಡಲಾಗಿದೆ. ಹವಾಮಾನ ವರದಿಯನ್ನು ಸಹ ಈ ಆಪ್ ನೀಡುತ್ತಿದ್ದು, ಪ್ರಸ್ತುತ ಮಾರುಕಟ್ಟೆ ದರವನ್ನು ರೈತರಿಗೆ ನೀಡುತ್ತದೆ. ಅದಲ್ಲದೇ ಕೃಷಿ ಇಲಾಖೆಯ ಪ್ರಮುಖ ಕಚೇರಿಗಳ ಹಾಗೂ ಎಪಿಎಂಸಿಗಳ ಮೊಬೈಲ್ ಸಂಖ್ಯೆಗಳನ್ನು ಒಳಗೊಂಡಿದ್ದು, ರೈತರಿಗೆ ನೆರವಾಗುತ್ತದೆ.
Mಕಿಸಾನ್ ಆಪ್-MKisan Application
Mಕಿಸಾನ್ ಆಪ್ನಲ್ಲಿ ಬಳಕೆದಾರರು ಪೋರ್ಟಾಲ್ಗೆ ನೋಂದಣಿಯಾಗದೆ ಕೃಷಿ ತಜ್ಞರು, ವಿವಿಧ ಸರ್ಕಾರಿ ಅಧಿಕಾರಿಗಳಿಂದ ಕೃಷಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಭಾರತದಲ್ಲಿ Mಕಿಸಾನ್ ಪೋರ್ಟಾಲ್ ಕೃಷಿ ಬಗೆಗಿನ ಅನೇಕ ಮಾಹಿತಿಯನ್ನು ನೀಡುತ್ತದೆ. ಈ ಆಪ್ನ್ನು ಕೃಷಿ ಮಂತ್ರಾಲಯದ ರಾಷ್ಟ್ರೀಯ ವಿದ್ಯುನ್ಮಾನ ಆಡಳಿತ ಯೋಜನೆ (NeGP-A) ಅಭಿವದ್ಧಿಪಡಿಸಿದೆ.
ಅಗ್ರಿ ಆಪ್-Agri App
ಅಗ್ರಿ ಆಪ್ ನಿಮಗೆ ಬೆಳೆ ಉತ್ಪನ್ನ, ಬೆಳೆ ರಕ್ಷಣೆ ಮತ್ತು ಕೃಷಿಗೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ರೈತರಿಗೆ ನೀಡುತ್ತದೆ. ಇದರಲ್ಲಿ ರೈತರು ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಉತ್ತರ ಪಡೆಯಬಹುದಾಗಿದೆ. ಹವಾಮಾನ ವರದಿ, ಮಾರುಕಟ್ಟೆ ದರಗಳನ್ನು ಈ ಆಪ್ ನೀಡಲಿದ್ದು, ಒಂದೇ ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ಅನೇಕ ಕೃಷಿ ಸಂಬಂಧಿತ ಮಾಹಿತಿ ನೀಡುತ್ತದೆ.
This News Article is a Copy of GIZBOT
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am