ಬ್ರೇಕಿಂಗ್ ನ್ಯೂಸ್
29-03-21 11:37 am Source: Vijaya Karnataka ಡಿಜಿಟಲ್ ಟೆಕ್
ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು.
ಅಂದಾಜು 200 ಕೋಟಿ ಬಳಕೆದಾರರನ್ನು ಹೊಂದಿರುವ ವಿಶ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ತನ್ನ ಹೊಸ ಅಪ್ಡೇಟ್ನಲ್ಲಿ ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗಾಗಿ ‘ಸ್ಟಿಕ್ಕರ್ ಸರ್ಚ್' ಫೀಚರ್ಸ್ ಅನ್ನು ನೀಡಿದೆ. ಅಂದರೆ ಬಳಕೆದಾರರು ಈಗ ಅಪ್ಲಿಕೇಶನ್ನಲ್ಲಿ ಕಸ್ಟಮೈಸ್ ಮಾಡಿದ ಸ್ಟಿಕ್ಕರ್ಗಳನ್ನು ಹುಡುಕಲು ಸಾಧ್ಯವಾಗುತ್ತದೆ.

ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು. ವಾಟ್ಸ್ಆ್ಯಪ್ ಈ ಹಿಂದೆ ಬಳಕೆದಾರರಿಗೆ ತನ್ನ ಪ್ಲಾಟ್ಫಾರ್ಮ್ನಲ್ಲಿ ಎಮೋಜಿಗಳು ಮತ್ತು ಜಿಐಎಫ್ಗಳನ್ನು ಹುಡುಕಲು ಮಾತ್ರ ಅವಕಾಶ ಮಾಡಿಕೊಟ್ಟಿತು. ಆದರೆ ಸ್ಟಿಕ್ಕರ್ ಸರ್ಚ್ ಫೀಚರ್ಸ್ ಮೂಲಕ ಕಸ್ಟಮ್ ಸ್ಟಿಕ್ಕರ್ಗಳ ಸಹಾಯದಿಂದ ಬಳಕೆದಾರರು ತಾವು ಹೇಳಲು ಬಯಸುವದನ್ನು ನಿಖರವಾಗಿ ಕಳುಹಿಸುವುದು ಸುಲಭವಾಗುತ್ತದೆ.
ಈ ತಿಂಗಳ ಆರಂಭದಲ್ಲಿ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಅಪ್ಡೇಟ್ ಅನ್ನು ಪರಿಚಯಿಸಿತ್ತು. ಈ ಅಪ್ಡೇಟ್ ಮೂಲಕ ಬಳಕೆದಾರರು ಥರ್ಡ್ ಪಾರ್ಟಿ ಅಪ್ಲಿಕೇಶನ್ಗಳಿಂದ ಅನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಎಲ್ಲಾ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗಾಗಿ ಆನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ವರ್ಲ್ಡ್ ವೈಡ್ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಿದೆ.

ಇನ್ನೂ ಇದಕ್ಕಾಗಿ ಬಳಕೆದಾರರು ತಮ್ಮ ಕ್ಯಾಮೆರಾ ರೋಲ್ನಿಂದ ವೀಡಿಯೊ ಅಥವಾ ಜಿಐಎಫ್ ಅನ್ನು ಆರಿಸುವ ಮೂಲಕ ಸ್ಟಿಕ್ಕರ್ ಪ್ಯಾಕ್ ರಚಿಸಲು ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಕು. ನಂತರ, ಅಪ್ಲಿಕೇಶನ್ ಅದನ್ನು ಸ್ವಯಂಚಾಲಿತವಾಗಿ .webp ಫೈಲ್ಗೆ ಪರಿವರ್ತಿಸುತ್ತದೆ, ಅದನ್ನು ಅಪ್ಲಿಕೇಶನ್ಗೆ ಆಮದು ಮಾಡಿಕೊಳ್ಳಬಹುದು. ಈ ರೀತಿಯಾಗಿ ಬಳಕೆದಾರರು ತಮ್ಮ ಸ್ನೇಹಿತರೊಂದಿಗೆ ಕಸ್ಟಮ್ ಸ್ಟಿಕ್ಕರ್ಗಳನ್ನು ಹಂಚುವ ಅವಕಾಶ ನೀಡಿದೆ.
This News Article Is A Copy Of Vijaya Karnataka
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am