ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am