ಬ್ರೇಕಿಂಗ್ ನ್ಯೂಸ್
            
                        01-05-21 03:24 pm Headline Karnataka News Network ಡಿಜಿಟಲ್ ಟೆಕ್
            Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
            
            
            Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm