ಬ್ರೇಕಿಂಗ್ ನ್ಯೂಸ್
            
                        06-05-21 03:08 pm GIZBOT Mutthuraju H M ಡಿಜಿಟಲ್ ಟೆಕ್
            ದಕ್ಷಿಣ ಕೋರಿಯಾದ ಜನ್ರಪಿಯ ಸ್ಮಾರ್ಟ್ಫೋನ್ ಕಂಪೆನಿ ಸ್ಯಾಮ್ಸಂಗ್ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎ ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ ಸರಣಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ ಎಂದು ಹೇಳಲಾಗ್ತಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ಎ ಸರಣಿಯಲ್ಲಿ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ ಪರಿಚಯಿಸಲಿದೆ ಎಂದು ಹೇಳಲಾಗ್ತಿದೆ.
ಹೌದು, ಸ್ಯಾಮ್ಸಂಗ್ ಸಂಸ್ಥೆ ತನ್ನ ಹೊಸ ಸ್ಮಾರ್ಟ್ಫೋನ್ ಗ್ಯಾಲಕ್ಸಿ A82 5G ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ ಹೆಸರನ್ನು ಕಂಪನಿಯು ಅಧಿಕೃತ ಭದ್ರತಾ ನವೀಕರಣ ವೆಬ್ಸೈಟ್ನಲ್ಲಿ ಉಲ್ಲೇಖಿಸಿ ದೃಡಪಡಿಸಿದೆ. ಇನ್ನು ಈ ಸ್ಮಾರ್ಟ್ಫೋನ್ ಬಿಡುಗಡೆ ದಿನಾಂಕದ ಬಗ್ಗೆ ಯಾವುದೆ ಮಾಹಿತಿ ಲಭ್ಯವಾಗಿಲ್ಲ.
ಸ್ಯಾಮ್ಸಂಗ್ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ 1440 x 3200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಕ್ವಾಡ್ ಎಚ್ಡಿ + ಡೈನಾಮಿಕ್ ಅಮೋಲೆಡ್ 2x ಡಿಸ್ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್ಪ್ಲೇ 392 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ ಎನ್ನಲಾಗಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 855+ ಚಿಪ್ಸೆಟ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಹೆಚ್ಚುವರಿ ಸಂಗ್ರಹ ಸ್ಥಳವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಸ್ಯಾಮ್ಸಂಗ್ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್ಫೋನ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್, ಎನ್ಎಫ್ಸಿ, ಸ್ಯಾಮ್ಸಂಗ್ ಪೇ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಈ ಸ್ಮಾರ್ಟ್ಫೋನ್ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ.
(Kannada Copy of  Gizbot Kannada)
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm