ಬ್ರೇಕಿಂಗ್ ನ್ಯೂಸ್
08-05-21 04:37 pm GIZBOT Mutthuraju H M ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವಿರುದ್ದ ಹೋರಾಡಲು ವ್ಯಾಪಕವಾಗಿ ಕೋವಿಡ್-19 ವ್ಯಾಕ್ಸಿನೇಷನ್ ಅಭಬಿಯಾನವನ್ನು ನಡೆಸಲಾಗುತ್ತಿದೆ. ಈಗಾಗಲೇ 18-45 ವರ್ಷದೊಳಗಿನ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇನ್ನು ಈ ಲಸಿಕೆ ಪಡೆಯಲು ಮೊದಲಿಗೆ ಕೋವಿನ್ ಪೋರ್ಟಲ್ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳವುದು ಅಗತ್ಯ. ಬಳಕೆದಾರರು ಈ ಪೋರ್ಟಲ್ ಮೂಲಕ ನೋಂದಾಯಿಸಬಹುದು, ತಮ್ಮ ವ್ಯಾಕ್ಸಿನ್ ಸ್ಲಾಟ್ಗಳನ್ನು ಕಾಯ್ದಿರಿಸಬಹುದು. ಅಲ್ಲದೆ ಲಸಿಕೆಗಾಗಿ ಅಪಾಯಿಂಟ್ಮೆಂಟ್ ಅನ್ನು ನಿಗದಿಪಡಿಸಬಹುದು.
ಹೌದು, ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹೆಸರು ನೋಂದಾಯಿಸಬಹುದಾಗಿದೆ. ಆದರೆ ಈ ಪ್ಲಾಟ್ಫಾರ್ಮ್ನಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ಬಳಕೆದಾರರಿಗೆ ಸಾಕಷ್ಟು ಕಿರಿಕಿರಿ ಆಗಿತ್ತು. ಆದರೆ ಇದೀಗ ಲಸಿಕೆ ಸ್ಲಾಟ್ ಕಾಯ್ದಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಾಲ್ಕು ಸಂಖ್ಯೆಗಳ ಹೊಸ ಕೋಡ್ ಅನ್ನು ಹೊರತಂದಿದೆ.

ಕೋವಿನ್ನಲ್ಲಿ ನಾಲ್ಕು-ಅಂಕಿಯ ಕೋಡ್
ಸದ್ಯ ಹೊಸದಾಗಿ ಪರಿಚಯಿಸಿರುವ ಹೊಸ ನಾಲ್ಕು-ಅಂಕಿಯ ಕೋಡ್ ಕೋವಿನ್ ವೆಬ್ಸೈಟ್ನಲ್ಲಿ ಸೆಕ್ಯುರಿಟಿ ಲೆಯರ್ ಆಗಿವೆ. ಇದು ದುರುದ್ದೇಶಪೂರಿತ ಚಟುವಟಿಕೆಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಇದರಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಲು ಸಾಧ್ಯವಾಗದ ರೀತಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಕೋವಿನ್ ಪ್ಲಾಟ್ಫಾರ್ಮ್ ಮೂಲಕ ಹಣಕಾಸಿನ ಲಾಭ ಮಾಡಲು ಹೊರಟಿರುವ ವಂಚಕರಿಗೆ ಅವಕಾಶವಿಲ್ಲದಂತಾಗಲಿದೆ.

ಇನ್ನು ಭದ್ರತೆಯ ಕಾರಣಕ್ಕಾಗಿ ಈ ಹೊಸ ನಾಲ್ಕು-ಅಂಕಿಯ ಕೋಡ್ ಪರಿಚಯಿಸಲಾಗಿದೆ. ಈ ಹೊಸ ನಾಲ್ಕು-ಅಂಕಿಯ ಕೋಡ್ ಒಟಿಪಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಫಲಾನುಭವಿಯು ತಮ್ಮ ನೋಂದಾಯಿತ ಫೋನ್ ಸಂಖ್ಯೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಲಾಟ್ ದೃಡಪಡಿಸಿದ ನಂತರ ಈ ಕೋಡ್ ಕಾಣಿಸಿಕೊಳ್ಳುತ್ತದೆ. ಇದು ಫಲಾನುಭವಿಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ. ಅಲ್ಲದೆ ನಾಲ್ಕು ಸಂಖ್ಯೆಯ ಕೋಡ್ ಪಡೆದವರು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಪ್ರಕ್ರಿಯೆಯನ್ನು ದೃಡೀಕರಿಸಲು ಈ ನಾಲ್ಕು-ಅಂಕಿಯ ಕೋಡ್ ಅನ್ನು ಒದಗಿಸಬೇಕಾಗುತ್ತದೆ.

ಕೋವಿನ್ನಲ್ಲಿ COVID-19 ಲಸಿಕೆ ನೋಂದಾಯಿಸುವುದು ಹೇಗೆ? ಇನ್ನು ಕೋವಿನ್ ಪೋರ್ಟಲ್ನಲ್ಲಿ COVID-19 ಲಸಿಕೆಗಾಗಿ ನೋಂದಾಯಿಸುವುದು ಹೇಗೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.
(Kannada Copy of Gizbot Kannada)
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm