ಬ್ರೇಕಿಂಗ್ ನ್ಯೂಸ್
13-05-21 04:50 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಸೊಶೀಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಇನ್ಸ್ಟಾಗ್ರಾಮ್ ಕೂಡ ಸೇರಿದೆ. ಬಳಕೆದಾರರ ನೆಚ್ಚಿನ ಫೋಟೋ ಶೇರಿಗ್ ಅಪ್ಲಿಕೇಶನ್ ಆಗಿ ಗುರುತಿಸಿಕೊಂಡಿದೆ. ಈಗಾಗಲೇ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಇನ್ಸ್ಟಾಗ್ರಾಮ್ ನಿಮ್ಮ ಪ್ರೊಫೈಲ್ಗಳಿಗೆ ಸರ್ವನಾಮಗಳನ್ನು ಸೇರಿಸಲು ಅನುವು ಮಾಡಿಕೊಡುವ ಹೊಸ ಫೀಚರ್ಸ್ ಅನ್ನು ಪರಿಚಯಿಸಿದೆ.
ಹೌದು, ಇನ್ಸ್ಟಾಗ್ರಾಮ್ ಹೊಸ ಫೀಚರ್ಸ್ ಅನ್ನು ಪರಿಚಯಿಸಿದೆ. ಇದು ನಿಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್ಗೆ ಸರ್ವನಾಮಗಳನ್ನು ಸೇರಿಸಲು ಅನುವು ಮಾಡಿಕೊಡಲಿದೆ. ಇದೀಗ ನೀವು ನಿಮ್ಮ ಫ್ರೊಫೈಲ್ಗೆ ನಾಲ್ಕು ಸರ್ವನಾಮಗಳನ್ನು ಸೇರಿಸಲು ಸಾಧ್ಯವಾಗುತ್ತದೆ. ಇದು ನಿಮ್ಮ ಇನ್ಸ್ಟಾಗ್ರಾಮ್ ಬಳಕೆದಾರ ಹೆಸರಿನ ಪಕ್ಕದಲ್ಲಿ ಕಾಣಿಸುತ್ತದೆ.

ಇನ್ಸ್ಟಾಗ್ರಾಮ್ನಲ್ಲಿ ಬಳಕೆದಾರರು ಇದೀಗ ಸರ್ವನಾಮಗಳನ್ನು ಸೇರಿಸಬಹುದಾಗಿದೆ. ಬಳಕೆದಾರರು ತಮ್ಮ ಸರ್ವನಾಮಗಳನ್ನು ತಮ್ಮ ಪ್ರೊಫೈಲ್ನಲ್ಲಿ ಪಬ್ಲಿಕ್ ಆಗಿ ಕಾಣುವಂತೆ ಇಲ್ಲವೇ ನಿಮ್ಮ ಸ್ನೇಹಿತರಿಗೆ ಮಾತ್ರ ಕಾಣುವಂತೆ ಮಾಡುವ ಅವಕಾಶವನ್ನು ಸಹ ಒಳಗೊಂಡಿದೆ. ಇನ್ಸ್ಟಾಗ್ರಾಮ್ ತಮ್ಮ ಬಳಕೆದಾರರ ಇನ್ಸ್ಟಾಗ್ರಾಮ್ ಪ್ರೊಫೈಲ್ಗೆ ಸೇರಿಸಲು ಆಯ್ಕೆ ಮಾಡಬಹುದಾದ ವಿಭಿನ್ನ ಸರ್ವನಾಮಗಳನ್ನು ನೀಡುತ್ತದೆ. ಇನ್ಸ್ಟಾಗ್ರಾಮ್ ಒದಗಿಸುವ ಆಯ್ಕೆಗಳ ಡೀಫಾಲ್ಟ್ ಪಟ್ಟಿಯಲ್ಲಿ ಲಭ್ಯವಿಲ್ಲದ ಸರ್ವನಾಮಗಳನ್ನು ಸೇರಿಸಲು ಬಳಕೆದಾರರಿಗೆ ಫಾರ್ಮ್ ಅನ್ನು ಭರ್ತಿ ಮಾಡಲು ಅನುಮತಿಸುವ ಹೆಚ್ಚುವರಿ ಆಯ್ಕೆಯನ್ನು ಸಹ ನೀಡಿದೆ.

ಇನ್ನು ಈ ಫೀಚರ್ಸ್ ಲಭ್ಯವಿರುವ ನಿಖರವಾದ ಪ್ರದೇಶಗಳ ಬಗ್ಗೆ ಇನ್ಸ್ಟಾಗ್ರಾಮ್ ಇನ್ನೂ ದೃಡೀಕರಿಸಿಲ್ಲ. ಆದರೆ ಈ ಹೊಸ ಫೀಚರ್ಸ್ ಈಗಾಗಲೇ "ಕೆಲವು ದೇಶಗಳಲ್ಲಿ" ಲಭ್ಯವಿದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ನಿಮಗೂ ಕೂಡ ಲಭ್ಯವಾದರೆ ನೀವು ‘ಪ್ರೊಫೈಲ್ ಎಡಿಟ್ ' ವಿಭಾಗದ ಅಡಿಯಲ್ಲಿ ಹೊಸ ‘ಪ್ರೊನೌನ್ಸ್ ಟ್ಯಾಬ್' ಅನ್ನು ನೋಡಲು ಸಾಧ್ಯವಾಗುತ್ತದೆ. ನಂತರ ನೀವು ಬಯಸುವ ಸರ್ವನಾಮಗಳನ್ನು ಟೈಪ್ ಮಾಡಬಹುದು ಮತ್ತು ಲಭ್ಯವಿರುವ ಆಯ್ಕೆಗಳ ಪಟ್ಟಿಯಿಂದ ಇನ್ಸ್ಟಾಗ್ರಾಮ್ ಸರ್ವನಾಮಗಳನ್ನು ಸೂಚಿಸುತ್ತದೆ. ನಿಮ್ಮ ಪ್ರೊಫೈಲ್ನಲ್ಲಿ ಗೋಚರಿಸುವ ನಾಲ್ಕು ಸರ್ವನಾಮಗಳನ್ನು ಆಯ್ಕೆ ಮಾಡಲು ಇನ್ಸ್ಟಾಗ್ರಾಮ್ ನಿಮಗೆ ಅನುಮತಿಸುತ್ತದೆ.

ಇನ್ಸ್ಟಾಗ್ರಾಮ್ನ ಈ ಹೊಸ ಫೀಚರ್ಸ್ ಬಳಕೆದಾರರನ್ನು ತಮ್ಮ ಬಯೋಸ್ನ ಭಾಗವಾಗಿಸುವ ಬದಲು ಸರ್ವನಾಮಗಳನ್ನು ನೇರವಾಗಿ ತಮ್ಮ ಪ್ರೊಫೈಲ್ಗಳಿಗೆ ಸೇರಿಸಲು ಆಯ್ಕೆ ಮಾಡಲು ಅನುಮತಿಸುತ್ತದೆ. ಬಳಕೆದಾರರು ತಮ್ಮ ಪ್ರೊಫೈಲ್ಗಳಿಗೆ ಸರ್ವನಾಮಗಳನ್ನು ಸೇರಿಸಲು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ಸಹ ಇದೇ ರೀತಿಯ ಫೀಚರ್ಸ್ ಪರಿಚಯಿಸಿರೋದನ್ನು ನಾವು ಗಮನಿಸಬಹುದಾಗಿದೆ.
(Kannada Copy of Gizbot Kannada)
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm