ಬ್ರೇಕಿಂಗ್ ನ್ಯೂಸ್
13-05-21 04:50 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಸೊಶೀಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಇನ್ಸ್ಟಾಗ್ರಾಮ್ ಕೂಡ ಸೇರಿದೆ. ಬಳಕೆದಾರರ ನೆಚ್ಚಿನ ಫೋಟೋ ಶೇರಿಗ್ ಅಪ್ಲಿಕೇಶನ್ ಆಗಿ ಗುರುತಿಸಿಕೊಂಡಿದೆ. ಈಗಾಗಲೇ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಇನ್ಸ್ಟಾಗ್ರಾಮ್ ನಿಮ್ಮ ಪ್ರೊಫೈಲ್ಗಳಿಗೆ ಸರ್ವನಾಮಗಳನ್ನು ಸೇರಿಸಲು ಅನುವು ಮಾಡಿಕೊಡುವ ಹೊಸ ಫೀಚರ್ಸ್ ಅನ್ನು ಪರಿಚಯಿಸಿದೆ.
ಹೌದು, ಇನ್ಸ್ಟಾಗ್ರಾಮ್ ಹೊಸ ಫೀಚರ್ಸ್ ಅನ್ನು ಪರಿಚಯಿಸಿದೆ. ಇದು ನಿಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್ಗೆ ಸರ್ವನಾಮಗಳನ್ನು ಸೇರಿಸಲು ಅನುವು ಮಾಡಿಕೊಡಲಿದೆ. ಇದೀಗ ನೀವು ನಿಮ್ಮ ಫ್ರೊಫೈಲ್ಗೆ ನಾಲ್ಕು ಸರ್ವನಾಮಗಳನ್ನು ಸೇರಿಸಲು ಸಾಧ್ಯವಾಗುತ್ತದೆ. ಇದು ನಿಮ್ಮ ಇನ್ಸ್ಟಾಗ್ರಾಮ್ ಬಳಕೆದಾರ ಹೆಸರಿನ ಪಕ್ಕದಲ್ಲಿ ಕಾಣಿಸುತ್ತದೆ.

ಇನ್ಸ್ಟಾಗ್ರಾಮ್ನಲ್ಲಿ ಬಳಕೆದಾರರು ಇದೀಗ ಸರ್ವನಾಮಗಳನ್ನು ಸೇರಿಸಬಹುದಾಗಿದೆ. ಬಳಕೆದಾರರು ತಮ್ಮ ಸರ್ವನಾಮಗಳನ್ನು ತಮ್ಮ ಪ್ರೊಫೈಲ್ನಲ್ಲಿ ಪಬ್ಲಿಕ್ ಆಗಿ ಕಾಣುವಂತೆ ಇಲ್ಲವೇ ನಿಮ್ಮ ಸ್ನೇಹಿತರಿಗೆ ಮಾತ್ರ ಕಾಣುವಂತೆ ಮಾಡುವ ಅವಕಾಶವನ್ನು ಸಹ ಒಳಗೊಂಡಿದೆ. ಇನ್ಸ್ಟಾಗ್ರಾಮ್ ತಮ್ಮ ಬಳಕೆದಾರರ ಇನ್ಸ್ಟಾಗ್ರಾಮ್ ಪ್ರೊಫೈಲ್ಗೆ ಸೇರಿಸಲು ಆಯ್ಕೆ ಮಾಡಬಹುದಾದ ವಿಭಿನ್ನ ಸರ್ವನಾಮಗಳನ್ನು ನೀಡುತ್ತದೆ. ಇನ್ಸ್ಟಾಗ್ರಾಮ್ ಒದಗಿಸುವ ಆಯ್ಕೆಗಳ ಡೀಫಾಲ್ಟ್ ಪಟ್ಟಿಯಲ್ಲಿ ಲಭ್ಯವಿಲ್ಲದ ಸರ್ವನಾಮಗಳನ್ನು ಸೇರಿಸಲು ಬಳಕೆದಾರರಿಗೆ ಫಾರ್ಮ್ ಅನ್ನು ಭರ್ತಿ ಮಾಡಲು ಅನುಮತಿಸುವ ಹೆಚ್ಚುವರಿ ಆಯ್ಕೆಯನ್ನು ಸಹ ನೀಡಿದೆ.

ಇನ್ನು ಈ ಫೀಚರ್ಸ್ ಲಭ್ಯವಿರುವ ನಿಖರವಾದ ಪ್ರದೇಶಗಳ ಬಗ್ಗೆ ಇನ್ಸ್ಟಾಗ್ರಾಮ್ ಇನ್ನೂ ದೃಡೀಕರಿಸಿಲ್ಲ. ಆದರೆ ಈ ಹೊಸ ಫೀಚರ್ಸ್ ಈಗಾಗಲೇ "ಕೆಲವು ದೇಶಗಳಲ್ಲಿ" ಲಭ್ಯವಿದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ನಿಮಗೂ ಕೂಡ ಲಭ್ಯವಾದರೆ ನೀವು ‘ಪ್ರೊಫೈಲ್ ಎಡಿಟ್ ' ವಿಭಾಗದ ಅಡಿಯಲ್ಲಿ ಹೊಸ ‘ಪ್ರೊನೌನ್ಸ್ ಟ್ಯಾಬ್' ಅನ್ನು ನೋಡಲು ಸಾಧ್ಯವಾಗುತ್ತದೆ. ನಂತರ ನೀವು ಬಯಸುವ ಸರ್ವನಾಮಗಳನ್ನು ಟೈಪ್ ಮಾಡಬಹುದು ಮತ್ತು ಲಭ್ಯವಿರುವ ಆಯ್ಕೆಗಳ ಪಟ್ಟಿಯಿಂದ ಇನ್ಸ್ಟಾಗ್ರಾಮ್ ಸರ್ವನಾಮಗಳನ್ನು ಸೂಚಿಸುತ್ತದೆ. ನಿಮ್ಮ ಪ್ರೊಫೈಲ್ನಲ್ಲಿ ಗೋಚರಿಸುವ ನಾಲ್ಕು ಸರ್ವನಾಮಗಳನ್ನು ಆಯ್ಕೆ ಮಾಡಲು ಇನ್ಸ್ಟಾಗ್ರಾಮ್ ನಿಮಗೆ ಅನುಮತಿಸುತ್ತದೆ.

ಇನ್ಸ್ಟಾಗ್ರಾಮ್ನ ಈ ಹೊಸ ಫೀಚರ್ಸ್ ಬಳಕೆದಾರರನ್ನು ತಮ್ಮ ಬಯೋಸ್ನ ಭಾಗವಾಗಿಸುವ ಬದಲು ಸರ್ವನಾಮಗಳನ್ನು ನೇರವಾಗಿ ತಮ್ಮ ಪ್ರೊಫೈಲ್ಗಳಿಗೆ ಸೇರಿಸಲು ಆಯ್ಕೆ ಮಾಡಲು ಅನುಮತಿಸುತ್ತದೆ. ಬಳಕೆದಾರರು ತಮ್ಮ ಪ್ರೊಫೈಲ್ಗಳಿಗೆ ಸರ್ವನಾಮಗಳನ್ನು ಸೇರಿಸಲು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ಸಹ ಇದೇ ರೀತಿಯ ಫೀಚರ್ಸ್ ಪರಿಚಯಿಸಿರೋದನ್ನು ನಾವು ಗಮನಿಸಬಹುದಾಗಿದೆ.
(Kannada Copy of Gizbot Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm