ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am