ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm