ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm