ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm