ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am