ಬ್ರೇಕಿಂಗ್ ನ್ಯೂಸ್
05-02-25 06:52 pm HK News Desk ಉದ್ಯೋಗ
ಹುಬ್ಬಳ್ಳಿ , ಫೆ 05: ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಹುಡುಕುತ್ತಿದ್ದರೆ ನಿಮಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ಹುಬ್ಬಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು. ಇದರಲ್ಲಿ ನೂರಾರು ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ. ಈ ಮೇಳದಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಉದ್ಯೋಗ ಮೇಳ ಯಾವಾಗ ನಡೆಯಲಿದೆ. ಎಲ್ಲಿ ನಡೆಯಲಿದೆ ಹಾಗೂ ಯಾರೆಲ್ಲ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಹುಬ್ಬಳ್ಳಿಯಲ್ಲಿ ಫೆಬ್ರವರಿ 8ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇಲ್ಲಿನ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್.ಪಿ. ಫೌಂಡೇಶನ್ ನವಲಗುಂದದ ಸಹಯೋಗದಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಇನ್ನು ಈ ಉದ್ಯೋಗ ಮೇಳವನ್ನು ಫೆಬ್ರವರಿ 8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
50 ಕಂಪನಿಗಳು ಭಾಗಿ:
ಹುಬ್ಬಳ್ಳಿಯಲ್ಲಿ ನಡೆಯಲಿರುವ ಈ ಬೃಹತ್ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಹಲವು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು. ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಮೇಳದಲ್ಲಿ 50ಕ್ಕೂ ಅಧಿಕ ಖಾಸಗಿ ವಲಯದ ಉದ್ಯೋಗದಾತರು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ನೇರ ಸಂದರ್ಶನ ಸಹ ನಡೆಯಲಿದೆ.
ಯಾರೆಲ್ಲ ಭಾಗವಹಿಸಬಹುದು:
ಇನ್ನು ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವವರು/ ಪಾಸಾಗಿರುವವರು ಭಾಗವಹಿಸಬಹುದಾಗಿದೆ. ಇನ್ನು ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕೆ 18 ರಿಂದ 35 ವಯಸ್ಸಿನ ಒಳಗಿರಬೇಕು. ಈ ವಯೋಮಾನದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಮೇಳದಲ್ಲಿ ಭಾಗವಹಿಸುವುದಕ್ಕೆ ಯಾವುದಾರೂ ಗೊಂದಲಗಳಿದ್ದರೆ. ಇಲ್ಲವೇ ಹೆಚ್ಚಿನ ಮಾಹಿತಿ ಬೇಕಾದರೆ 9535360259, 8453208555, 9806905751 ಹಾಗೂ 9164192155 ಮೊಬೈಲ್ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Job News kannada, Hubballi Feb 8th job fair organised, apply now or contact the numbers listed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am