ಬ್ರೇಕಿಂಗ್ ನ್ಯೂಸ್
30-07-25 03:26 pm Bangalore Correspondent ಉದ್ಯೋಗ
ಬೆಂಗಳೂರು, ಜುಲೈ 30 : ಕೇಂದ್ರ ಗೃಹ ಸಚಿವಾಲಯದ ಅಧೀನದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಕ್ರೀಡಾ ಕೋಟಾದಡಿ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) (ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 241 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಈಜು, ಡೈವಿಂಗ್, ವಾಟರ್ ಪೋಲೋ, ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಕ್ರಾಸ್ ಕಂಟ್ರಿ, ಈಕ್ವೆಸ್ಟ್ರಿಯನ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಐಸ್ ಸ್ಕೀಯಿಂಗ್, ಜೂಡೋ, ಕರಾಟೆ, ವಾಲಿಬಾಲ್, ವೇಟ್ ಲಿಫ್ಟಿಂಗ್, ವಾಟರ್ ಸ್ಪೋರ್ಟ್ಸ್, ಕುಸ್ತಿ, ಶೂಟಿಂಗ್, ಟೇಕ್ವಾಂಡೋ, ವುಶು, ಫೆನ್ಸಿಂಗ್, ಕಯಾಕಿಂಗ್, ಕ್ಯಾನೋಯಿಂಗ್ (ಬೋಟ್ ರೇಸಿಂಗ್), ರೋಯಿಂಗ್, ಟೇಬಲ್ ಟೆನಿಸ್ ಹೀಗೆ ಯಾವುದಾದರೂ ಒಂದು ಕ್ರೀಡೆಯಲ್ಲಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 147 ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆ ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಯಾವುದೇ ಲಿಖಿತ ಪರೀಕ್ಷೆ ನಡೆಸದೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
The Border Security Force (BSF), under the Ministry of Home Affairs, Government of India, has invited online applications from eligible male and female candidates for recruitment to 241 Constable (General Duty) posts under the Sports Quota. These are non-gazetted, non-ministerial positions.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm