ಬ್ರೇಕಿಂಗ್ ನ್ಯೂಸ್
07-08-25 12:10 pm HK News Desk ಉದ್ಯೋಗ
ಬೆಂಗಳೂರು, ಆ.7 : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 10 ಸಾವಿರಕ್ಕೂ ಹೆಚ್ಚು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ' (ಎಸ್ಬಿಐ) ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಆ.6ರಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬ್ಯಾಂಕ್ನ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್ಲ್ಯಾಗ್ ಹುದ್ದೆಗಳು ಸೇರಿದಂತೆ ಒಟ್ಟು 468 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯುವ ಅವಕಾಶವೂ ಇದೆ. ನೇಮಕ ಪ್ರಕ್ರಿಯೆಯ ಭಾಗವಾಗಿ ಸ್ಥಳೀಯ ಭಾಷಾ ಪರೀಕ್ಷೆಯೂ ನಡೆಯಲಿದೆ. ಈ ವರ್ಷದ ಸೆಪ್ಟೆಂಬರ್ ಮತ್ತು ನವೆಂಬರ್ನಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 14,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಎಸ್.ಬಿಐ ನೇಮಕಾತಿ ನಡೆಸಿತ್ತು.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇಂಟಗ್ರೇಟೆಡ್ ಡ್ಯೂಯಲ್ ಡಿಗ್ರಿ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರು. ರಾಜ್ಯದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಬರೆಯಲು ತಿಳಿದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯೋಮಿತಿ 28 ವರ್ಷ ಆಗಿರುತ್ತದೆ.
The State Bank of India (SBI) has invited online applications for the recruitment of 6,589 Clerical Cadre (Junior Associate - Customer Support & Sales) posts across the country. The application process began on August 6 and will remain open until August 26.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm