ಬ್ರೇಕಿಂಗ್ ನ್ಯೂಸ್
16-09-21 06:51 pm Source ; One India Kannada ಉದ್ಯೋಗ
ಮೈಸೂರು, ಸೆಪ್ಟೆಂಬರ್ 16 : ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಟ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಆ ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರದ ಪತ್ರ ಸಂ.ಲಾ ಎಲ್.ಎಡಿ/155/2021 ದಿ:31-08-2021 ರಂತೆ ಉದ್ದೇಶಿಸಲಾಗಿದೆ.
ಈ ಬಗ್ಗೆ ಅರ್ಜಿಗಳನ್ನು ಪಡೆದು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಮೈಸೂರಿನಲ್ಲಿ ಹುದ್ದೆಗೆ ನೇಮಕಾತಿ ಬಯಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಾವಳಿ 1977 ನಿಯಮ 26 ರಲ್ಲಿ ತಿಳಿಸಿರುವ ಅಗತ್ಯ ಸರತ್ತುಗಳನ್ನು ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು. ಆಸಕ್ತರು ತಮ್ಮ ಹೆಸರು, ವಿಳಾಸ, ಜಾತಿ, ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿನ ಅನುಭವ ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಆಸಕ್ತರು ಅರ್ಜಿಯನ್ನು ಸೆಪ್ಟೆಂಬರ್ 30ರೊಳಗಾಗಿ ಕಛೇರಿ ವೇಳೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ; ಕೋವಿಡ್ ಪರಿಸ್ಥಿತಿಯಲ್ಲಿ ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸಲು ಸಾಕಷ್ಟು ನುರಿತ ಆರೋಗ್ಯ ತಂತ್ರಜ್ಞರ ಅವಶ್ಯಕತೆ ಇರುತ್ತದೆ. ಅದರಂತೆ ಆರೋಗ್ಯ ವಲಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ತಂತ್ರಜ್ಞರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವುದು ಅವಶ್ಯಕವಾಗಿರುತ್ತದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದಂತೆ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಸನ ಇವರಿಂದ ಕೌಶಲ್ಯಾಧಾರಿತ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು.
ಎಸ್. ಎಸ್. ಎಲ್. ಸಿ ಪಾಸಾದ ಯುವಕ-ಯುವತಿಯರಿಗೆ, ಜನರಲ್ ಡ್ಯೂಟಿ ಅಸಿಸ್ಟೆಂಟ್, ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸ್, ಹೋಂ ಹೆಲ್ತ್ ಏಡ್, ಮೆಡಿಕಲ್ ಇಕ್ವಿಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್. ಪಿ.ಯು.ಸಿ ಪಾಸಾದ ಯುವಕ-ಯುವತಿಯರಿಗೆ, ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್-ಬೇಸಿಕ್, ಫೆಲೋಬೋಟಮಿಸ್ಟ್ ಪಿ.ಯು.ಸಿ (ಸೈನ್ಸ್) ಪಾಸಾದವರು ತರಬೇತಿ ನೀಡಲಾಗುತ್ತದೆ.
ಈ ವೃತ್ತಿ ತರಬೇತಿ ಅಲ್ಪಾವಧಿಯದ್ದಾಗಿದ್ದು ತರಬೇತಿಯನ್ನು ಜಿಲ್ಲಾ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ/ ಖಾಸಗಿ ಆಸ್ಪತ್ರೆಗಳಲ್ಲಿ ನೀಡಬಹುದಾಗಿರುತ್ತದೆ. ಹೆಸರು ನೋಂದಾಯಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷಗಳು.
ಆಸಕ್ತ, ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಿಬ್ಬಂದಿಗಳ ಮೊಬೈಲ್ಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ. 8861646939 ಅಥವಾ ಸಹಾಯಕ ನಿರ್ದೇಶಕರು 9844552919/ 9008509040.

ಆಕ್ಷೇಪಣೆಗಳಿದ್ದರೆ ಸಲ್ಲಿಸಿ; ಶಿಶು ಅಭಿವೃದ್ಧಿ ಯೋಜನೆ ತೀರ್ಥಹಳ್ಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಘಂಟೆಜನಗಲ್ (ಮಿನಿ), ಗುರುವಳ್ಳಿ (ಮಿನಿ) ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ ಬೇಗುವಳ್ಳಿ, ಬಾಂಡ್ಯ, ಮರಗಳಲೆ ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆ ಸ್ಥಾನಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತೀರ್ಥಹಳ್ಳಿ ಕಚೇರಿಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 21/09/2021ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸೊಪ್ಪುಗುಡ್ಡೆ, ತೀರ್ಥಹಳ್ಳಿ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Applications invited to the Government Lawyer post at Mysuru district. Candidates can apply till September 30, 2021.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am