ಬ್ರೇಕಿಂಗ್ ನ್ಯೂಸ್
17-09-21 07:08 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 17 : ಕರ್ನಾಟಕದಲ್ಲಿನ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ & ಪದವಿಪೂರ್ವ ಕಾಲೇಜುಗಳಲ್ಲಿ ಮಂಜೂರಾದ ಹುದ್ದೆ, ಖಾಲಿ ಇರುವ ಹುದ್ದೆ, ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವರು ವಿಧಾನ ಪರಿಷತ್ತಿನಲ್ಲಿ ಉತ್ತರ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ ಕೇಳಿದ್ದ ಪ್ರಶ್ನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಉತ್ತರ ಕೊಟ್ಟಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಶಿಕ್ಷಣ ಸಚಿವರು ಈ ಕುರಿತು ಲಿಖಿತ ಉತ್ತರ ನೀಡಿದ್ದಾರೆ.
ಭರ್ತಿಯಾದ ಹುದ್ದೆಗಳೆಷ್ಟು?, ಖಾಲಿ ಇರುವ ಹುದ್ದೆಗಳೆಷ್ಟು? ಹಾಗೂ ಖಾಲಿ ಇರುವ ಹುದ್ದೆಗಳನ್ನು ಯಾವಾಗ ಭರ್ತಿ ಮಾಡಲಾಗುವುದು? ಎಂಬುದರ ಕುರಿತು ಸಚಿವರು ವಿವರಣೆ ನೀಡಿದ್ದಾರೆ.
ಕೆ. ಟಿ. ಶ್ರೀಕಂಠೇಗೌಡರು ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಮಂಜೂರಾದ ಒಟ್ಟು ಶಿಕ್ಷಕರು, ಉಪನ್ಯಾಸಕರ ಹುದ್ದೆಗಳು ಎಷ್ಟು?. ಇದರಲ್ಲಿ ಭರ್ತಿಯಾದ ಹುದ್ದೆಗಳು ಎಷ್ಟು, ಖಾಲಿ ಇರುವ ಹುದ್ದೆಗಳು ಎಷ್ಟು? ಎಂದು ಪ್ರಶ್ನಿಸಿದ್ದರು.

ಈ ಖಾಲಿ ಇರುವ ಹುದ್ದೆಗಳನ್ನು ಯಾವಾಗ ಭರ್ತಿ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆಗಳಿಗೆ ಸಚಿವರು ಉತ್ತರ ಕೊಟ್ಟಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 3503 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ನಿರ್ದೇಶಕರಿಂದ ಪ್ರಸ್ತಾವನೆ ಪಡೆದು ಪರಿಶೀಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಮಂಜೂರಾದ, ಖಾಲಿ ಇರುವ ಒಟ್ಟು ಶಿಕ್ಷಕರು, ಉಪನ್ಯಾಸಕರ ಹುದ್ದೆಗಳ ವಿವರಗಳು.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಂಜೂರಾದ ಒಟ್ಟು ವೃಂದ ಬಲ 1,88,540. ಶಾಲೆಗಳಲ್ಲಿನ ಕಾರ್ಯನಿರತ ಹುದ್ದೆಗಳ ಸಂಖ್ಯೆ 1,62,727 ಹಾಗೂ ಖಾಲಿ ಇರುವ ಹುದ್ದೆಗಳ ಸಂಖ್ಯೆ 25,813.
ಸರ್ಕಾರಿ ಪ್ರೌಢ ಶಾಲೆಗಳಿಗೆ ಮಂಜೂರಾದ ಒಟ್ಟು ವೃಂದ ಬಲ 52,630. ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರತ ಹುದ್ದೆಗಳು 36,453. ಖಾಲಿ ಇರುವ ಹುದ್ದೆಗಳು 15,907.
ಇನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮಂಜೂರಾದ ಒಟ್ಟು ವೃಂದಬಲ 12,857. ಕಾಲೇಜಗಳಲ್ಲಿ ಕಾರ್ಯನಿರತ ಹುದ್ದೆಗಳು 9,354. ಖಾಲಿ ಇರುವ ಹುದ್ದೆಗಳು 3,503.
ಖಾಲಿ ಹುದ್ದೆಗಳ ಭರ್ತಿ; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 25,813 ಹುದ್ದೆಗಳಲ್ಲಿ ಪ್ರಸ್ತುತ ಸಾಲಿನಲ್ಲಿ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಸಂಬಂಧ ಪರಿಶೀಲನೆಯಲ್ಲಿದೆ.
ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 5,500 ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದೆ.
ಇನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 3503 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ನಿರ್ದೇಶಕರಿಂದ ಪ್ರಸ್ತಾವನೆ ಪಡೆದು ಪರಿಶೀಲನೆ ನಡೆಸಲಾಗುತ್ತದೆ.

ವೇತನ ತಾರತಮ್ಯ ನಿವಾರಣೆಗೆ ಸಭೆ; ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢ ಶಾಲಾ ಶಿಕ್ಷಕರ ಹುದ್ದೆಗೆ ಮತ್ತು ಪ್ರೌಢ ಶಾಲಾ ಹಂತದಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಿದವರಿಗೆ ಕಾಲಮಿತಿ ವೇತನ ನೀಡಲು ಹಲವಾರು ತೊಡಕುಗಳಿವೆ.
"ವೇತನ ತಾರತಮ್ಯ ನಿವಾರಣೆಗೆ ಇರುವ ತೊಡಕುಗಳನ್ನು ಪರಿಹರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಆಯೋಜಿಸಲಾಗುತ್ತದೆ" ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆದಾಗ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, "ಬಡ್ತಿ ಪಡೆದಿರುವರಿಗೆ ಸಹಜವಾಗಿಯೇ ವೇತನ ಮತ್ತು ಭತ್ಯೆಗಳು ಹೆಚ್ಚಾಗಬೇಕು. ಶಿಕ್ಷಕರು ಮತ್ತು ಉಪನ್ಯಾಸಕರ ವಿಚಾರದಲ್ಲಿ ಇದು ತದ್ವಿರುದ್ಧ. ಶೈಕ್ಷಣಿಕ ಅರ್ಹತೆ ಆಧಾರದಲ್ಲಿ ಬಡ್ತಿ ಪಡೆದಿರುವವರಿಗೆ ವೇತನ ನಿಗದಿ ಮಾಡಲು ಇರುವ ನಿಯಮಗಳೇ ಅವೈಜ್ಞಾನಿಕ" ಎಂದು ಹೇಳಿದರು.
Karnataka Minister of Primary and Secondary Education B. C. Nagesh written reply for the question on Teacher and Lecturer Recruitment in State.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am