ಬ್ರೇಕಿಂಗ್ ನ್ಯೂಸ್
            
                        08-09-20 06:46 pm Udupi Reporter ಕರಾವಳಿ
            ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm