ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm