ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm