ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm