ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm