ಬ್ರೇಕಿಂಗ್ ನ್ಯೂಸ್
29-05-22 08:23 pm HK News Desk ಕರ್ನಾಟಕ
ಹಾವೇರಿ, ಮೇ 29: ಬಸವರಾಜ ಹೊರಟ್ಟಿ ಸೋಲಿನ ಭೀತಿ ಹಾಗೂ ಅಧಿಕಾರದ ಆಸೆಯಿಂದ ಬಿಜೆಪಿ ಸೇರಿದ್ದಾರೆ. ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ನಂಬಿದ ಸಿದ್ಧಾಂತ ಬಲಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಲೀಂ ಅಹ್ಮದ್, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ್ ಸ್ಪರ್ಧಿಸಿದ್ದಾರೆ. ಬಸವರಾಜ ಗುರಿಕಾರ್ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಅವರ ಕೆಲಸ ಪ್ರಾಮಾಣಿಕತೆ, ಹೋರಾಟ ಎಲ್ಲ ಶಿಕ್ಷಕರಿಗೆ ಗೊತ್ತಿದೆ. ಬಸವರಾಜ ಹೊರಟ್ಟಿಯವರು ಈ ಕ್ಷೇತ್ರದಿಂದ ಏಳು ಬಾರಿ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಕೊನೆಗಾಲದಲ್ಲಿ ಹೊರಟ್ಟಿಯವರು ಪಕ್ಷ ಬದಲಾವಣೆ ಮಾಡಿದ್ದಾರೆ. ಇದಕ್ಕೆ ಕಾರಣ ಸೋಲಿನ ಭೀತಿ ಇರಬಹುದು. ಇಲ್ಲದಿದ್ದರೆ ಅಧಿಕಾರದ ಆಸೆಯೂ ಇರಬಹುದು. ಮತ್ತೆ ಚೇರ್ಮನ್ ಆಗಿ ಮುಂದುವರೆಯಬಹುದು ಎಂಬ ದೂರಾಲೋಚನೆ ಇಟ್ಟುಕೊಂಡು ಬಿಜೆಪಿಗೆ ಹೋಗಿದ್ದಾರೆ.

ಈತನಕ ಜಾತ್ಯಾತೀತ ವಿಚಾರ ಇಟ್ಟುಕೊಂಡು ಚುನಾವಣೆ ಗೆದ್ದು ಅವರು ಈಗ ಕೋಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಹೊರಟ್ಟಿ ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ಸಿದ್ಧಾಂತ ಬಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗಾಗಿ ಶಿಕ್ಷಕರು ಈ ಬಾರಿ ಬಸವರಾಜ ಗುರಿಕಾರ್ ಅವರಿಗೆ ಆಶೀರ್ವಾದ ಮಾಡಬೇಕು. ಜಾತ್ಯತೀತ ಸಿದ್ಧಾಂತಕ್ಕೆ ಜಯ ದೊರಕಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಪ್ರಧಾನಿ ನೆಹರು ಹಾಗೂ ಪ್ರಧಾನಿ ಮೋದಿ ಸಾಧನೆಗಳ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದು ಎಂಟು ವರ್ಷವಾದರೂ ಒಂದೇ ಒಂದು ಪ್ರೆಸ್ ಕಾನ್ಫರೆನ್ಸ್ ಮಾಡಿಲ್ಲ. ಸುಳ್ಳು ಹೇಳುತ್ತಾ ಮೋದಿ ಅಧಿಕಾರ ನಡೆಸುತ್ತಾ ಬಂದಿದ್ದಾರೆ. ಮೈ ನರೇಂದ್ರ ಮೋದಿ ಹುಂ ಅಂತ ಹೇಳ್ತಾರಲ್ಲಾ ಅದೊಂದೇ ಅವರು ಹೇಳಿದ ಸತ್ಯ. ನೆಹರೂರವರು ತಮ್ಮ ಅಧಿಕಾರಾವಧಿಯಲ್ಲಿ ಕಟ್ಟಿ ಬೆಳೆಸಿದ ಸಂಸ್ಥೆ, ಕಟ್ಟಡಗಳು ಎಲ್ಲವನ್ನೂ ಇವರು ಮಾರಿದರು. ಅವರು ಕಟ್ಟಿದ್ದರು, ಇವರು ಮಾರಿದರು. ಇದೇ ನೆಹರೂ ಹಾಗೂ ಮೋದಿಯವರ ನಡುವೆ ಇರುವ ವ್ಯತ್ಯಾಸ ಎಂದು ಮೋದಿ ವಿರುದ್ದ ಸಲೀಂ ಅಹ್ಮದ್ ವ್ಯಂಗ್ಯವಾಡಿದರು.
Desire for position Basavaraj Horatti has joined BJP, slams KPCC secretary Salim Ahmed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm