ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm