ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm