ಬ್ರೇಕಿಂಗ್ ನ್ಯೂಸ್
05-06-22 01:35 pm HK News Desk ಕರ್ನಾಟಕ
ಶಿವಮೊಗ್ಗ, ಜೂ 05: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಎಸ್ಎಸ್ ಬಗ್ಗೆ ಮಾತನಾಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾನೆ. ಅವನೊಬ್ಬ ಹುಚ್ಚ. ಆ ಹುಚ್ಚನಿಗೆ ಯಾವ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸುತ್ತಾ ಹುಚ್ಚ, ಹುಚ್ಚ ಎಂದು ಕರೆದಿದ್ದಾರೆ. ಚಡ್ಡಿ ಹಾಕಿದ್ದವರೇ ಇಂದು ದೇಶವನ್ನು ಆಳುತ್ತಿದ್ದಾರೆ. ಚಡ್ಡಿಯೇ ಇಂದು ನಮಗೆ ಸಾಕಷ್ಟು ಕಲಿಸಿಕೊಟ್ಟಿದ್ದು, ಚಡ್ಡಿ ದೇಶವನ್ನು ಸುಸಂಸ್ಕೃತ ದೇಶವನ್ನಾಗಿಸಿದೆ. ಸಿದ್ದರಾಮಯ್ಯ ಹುಚ್ಚಾಟದ ಹೇಳಿಕೆಗಳಿಂದ ಪ್ರಚಾರವನ್ನು ಪಡೆಯುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್ಗೆ ಸೇರಿಸಿದ್ರೂ ಅಲ್ಲಿಯೂ ಕೂಡ ಔಷಧಿ ಇಲ್ಲ. ದೇಶದ ಯಾವುದೇ ಆಸ್ಪತ್ರೆಯಲ್ಲೂ ಔಷಧವಿಲ್ಲ ಎಂದು ಹರಿಹಾಯ್ದರು.

ಇಂತಹ ಹುಚ್ಚನನ್ನು ಕಟ್ಟಿಕೊಂಡು ಹೇಗಪ್ಪ ನಾವು ಸರ್ಕಾರ ಮಾಡೋದು ಎಂದು ಅವರ ಪಕ್ಷದವರೇ ಹೇಳುತ್ತಿದ್ದಾರೆ. ತನ್ನುನ್ನು ಮುಂದಿನ ಸಿಎಂ ಎಂದು ಕರೆಯಬೇಡಿ ಎಂದು ಮುಂದೆ ಹೇಳುತ್ತಾರೆ. ಆದರೆ ಹಿಂದೆ ಹೋಗಿ ನಾನೇ ಸಿಎಂ ಎಂದು ಹೇಳಿ ಎಂದು ಹುಚ್ಚ ಬೆಂಬಲಿಗರಿಗೆ ಸಿದ್ದರಾಮಯ್ಯ ಹೇಳಿ ಕೊಡುತ್ತಿದ್ದಾರೆ. ಚಡ್ಡಿ ವಿಚಾರಕ್ಕೆ ಬಂದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿದರು.

ದೇಶದಲ್ಲಿ ಕಾಂಗ್ರೆಸ್ ಮೂಲೆ ಸೇರುತ್ತಿದೆ. ಸೋನಿಯಾ ಗಾಂಧಿ ಬುದ್ಧಿ ಹೇಳಿದರೂ ಕೇಳುತ್ತಿಲ್ಲ. ರಾಹುಲ್ ಗಾಂಧಿಗೆ ಬುದ್ಧಿಯೇ ಇಲ್ಲ. ಖರ್ಗೆ ದೆಹಲಿಗೆ ಹೋಗಿ ವಾಪಸ್ ಬಂದ್ರು. ದೇಶದ ಎಲ್ಲಾ ಕಡೆ ಕಾಂಗ್ರೆಸ್ ನಿರ್ನಾಮವಾಗುತ್ತಿದೆ. ನಿಮಗೆ ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದು ಗೊತ್ತಾಗುತ್ತಿಲ್ಲ. ನೀವು 20 ಕಡೆ ನಿಂತರೂ ಅಲ್ಲಿ ಚಡ್ಡಿ ನಿಮ್ಮನ್ನು ಸೋಲಿಸುತ್ತದೆ ಎಂದರು.

ಸಿದ್ದರಾಮಯ್ಯ ಅವರಿಗೆ ಗೌರವ ಕೊಡಲು ನನಗೆ ಮನಸ್ಸು ಬರುತ್ತಿಲ್ಲ. ಆರ್ಎಸ್ಎಸ್ ಬಗ್ಗೆ ಮಾತನಾಡಿದರೆ, ನಾನಲ್ಲ, ರಸ್ತೆಯಲ್ಲಿ ಹೋಗುವ ನಾಯಿಯು ಸಹ ಬೆಲೆ ಕೊಡುವುದಿಲ್ಲ. ಪ್ರತಿಪಕ್ಷ ನಾಯಕ ಸ್ಥಾನದ ಗೌರವ ಉಳಿಸದ ವ್ಯಕ್ತಿ ಸಿದ್ದರಾಮಯ್ಯ. ಆರ್ಎಸ್ಎಸ್ನ ಚಡ್ಡಿಯ ಭಯ ಸಿದ್ದರಾಮಯ್ಯನಿಗೆ ಶುರುವಾಗಿದೆ. ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಪಕ್ಷ. ಆದರೆ ಈಗ ಕಾಂಗ್ರೆಸ್ನವರೇ ಸಿದ್ದರಾಮಯ್ಯನಂತ ಗೂಂಡಾಗಳು ಪಕ್ಷದಲ್ಲಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿದೆ. ಬಲಹೀನ ಸಿದ್ದರಾಮಯ್ಯ ಆರ್ಎಸ್ಎಸ್ ಬಲಶಾಲಿಗೆ ಏನೂ ಮಾಡಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಭಾರತೀಯ ಸಂಸ್ಕೃತಿ ಉಳಿಸುತ್ತಿರುವುದು ಆರ್ಎಸ್ಎಸ್ ಸಂವಿಧಾನಕ್ಕೆ ವಿರುದ್ಧವಾದ ಒಂದೇ ಒಂದು ಕೆಲಸವನ್ನು ಆರ್ಎಸ್ಎಸ್ ಮಾಡಿಲ್ಲ ಎಂದು ಕಿಡಿಕಾರಿದರು.
Eshwarappa calls Siddaramaiah as mental, no hospital has medicine for him. He also stated that I don't even feel to respect him during a press meet held at Shivamogga.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm