ಬ್ರೇಕಿಂಗ್ ನ್ಯೂಸ್
29-09-20 01:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 29: ಬೆಂಗಳೂರು ಉಗ್ರರ ಸ್ವರ್ಗವಾಗಿದೆ ಎಂಬ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು' ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಬೆಂಗಳೂರು ಬಿಬಿಎಂಪಿ, 28 ವಿಧಾನಸಭೆ ಕ್ಷೇತ್ರ, ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗ್ಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕೆಲವರಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ! ಎನ್ನುವ ಮೂಲಕ ಯುವಮೋರ್ಚಾ ಅಧ್ಯಕ್ಷರಾಗಿ ನೇಮಕವಾದೊಡನೆ ಇಂತಹ ಹೇಳಿಕೆ ಬಂದಿರುವ ನೆಲೆಯಲ್ಲಿ ಪರೋಕ್ಷವಾಗಿ ಟೀಕಿಸಿದ್ದಾರೆ.
Join our WhatsApp group for latest news updates (2)
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
— H D Kumaraswamy (@hd_kumaraswamy) September 29, 2020
1/4
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
— H D Kumaraswamy (@hd_kumaraswamy) September 29, 2020
3/4
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm