ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm