ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm