ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm